August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಜೂನ್ ೨೧ರಂದು ಜರುಗಿತು.

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ಪ್ರತೀತ್ ದೀಪ ಬೆಳಗಿಸಿ ಉದ್ಘಾಟಿಸಿ ಯೋಗದಿಂದ ಮನಸ್ಸು ಮತ್ತು ದೇಹ ಲವಲವಿಕೆಯಿಂದ ಇರುತ್ತದೆ. ಯೋಗ ಎಂದರೆ ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಒಂದು ಪ್ರಾಚೀನ ಭಾರತೀಯ ಪದ್ಧತಿ. “ಯೋಗ” ಎಂಬ ಪದವು ಸಂಸ್ಕೃತದ ಯುಜ್ ಧಾತುವಿನಿಂದ ಬಂದಿದ್ದು, ಅದರ ಅರ್ಥ “ಸೇರುವುದು” ಅಥವಾ “ಒಗ್ಗೂಡುವುದು ಎಂದು ಅರ್ಥ ಎಂದರು.

ರತ್ನ ಮಾನಸದ ನಿಲಯಪಾಲಕ ಯತೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಯೋಗದ ಮುಖ್ಯ ಪ್ರಯೋಜನಗಳು ದೇಹದ ಲವಚಿಕತೆ (Flexibility) ಹೆಚ್ಚಿಸುತ್ತದೆ. ಸ್ನಾಯುಗಳ ಬಲವನ್ನು ವೃದ್ಧಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.ಏಕಾಗ್ರತೆ ಮತ್ತು ಮನಶ್ಶಾಂತಿಯನ್ನು ಹೆಚ್ಚಿಸುತ್ತದೆ. ಆರೋಗ್ಯಕರ ಜೀವನಶೈಲಿಗೆ ಸಹಕಾರಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ವಿದ್ಯಾಕಿರಣ್ ಕೇವಲ ಇವತ್ತು ಮಾತ್ರ ಯೋಗ ಮಾಡಿದರೆ ಸಾಲದು ಪ್ರತಿನಿತ್ಯ ನಮ್ಮ ಜೀವನದ ಒಂದು ಅಂಗವಾಗಿ ಯೋಗವನ್ನು ಮಾಡಬೇಕು ಎಂದರು.

ವೇದಿಕೆಯಲ್ಲಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ತರಬೇತಿ ನೀಡಿದ ವಿದ್ಯಾರ್ಥಿಗಳಾದ ನಂದಿತ ವೆಟ್ರಿವೆಲ್ ಪ್ರಾಂಜಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕರಾದ ಚಂದ್ರಶೇಖರ ಭಟ್ ಸ್ವಾಗತಿಸಿದರು. ಜ್ಞಾನೇಶ್ ವಂದಿಸಿದರು. ರವೀಶ್ ಕಾರ್ಯಕ್ರಮ ನಿರೂಪಿಸಿದರು

Related posts

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya
error: Content is protected !!