24.1 C
ಪುತ್ತೂರು, ಬೆಳ್ತಂಗಡಿ
June 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿ ಯ ಶಾಲಾ ಸಂಸತ್ ಚುನಾವಣೆಯನ್ನು ವಿದ್ಯುನ್ಮಾನ ಮತಯಂತ್ರ ದ ಮಾದರಿಯಲ್ಲಿ ನಡೆಸಲಾಯಿತು.

ಶಾಲಾ ಮಕ್ಕಳಿಗೆ ಚುನಾವಣೆ ವ್ಯವಸ್ಥೆಯನ್ನು ಪರಿಚಯಿಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆಯಲ್ಲಿ ನಡೆಸುವ ಎಲ್ಲಾ ಹಂತಗಳನ್ನು ಅನುಸರಿಸಲಾಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಪ್ರಚಾರ, ಮತಗಟ್ಟೆ, ಸರತಿ ಸಾಲು, ಪೊಲೀಸ್ ವ್ಯವಸ್ಥೆ,ಮತಯಂತ್ರ, ಅಳಿಸಲಾಗದ ಶಾಯಿ ಬಳಕೆ, ಫಲಿತಾಂಶ ಘೋಷಣೆ ಇತ್ಯಾದಿ ಅಂಶಗಳ ಪ್ರಾತ್ಯಕ್ಷಿಕ ಮಾಹಿತಿ ನೀಡಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ 5ನೇ ತರಗತಿಯ ರಿಷಿಕಾ, ಉಪ ಮುಖ್ಯಮಂತ್ರಿಯಾಗಿ ಜೀವಿತ್ (5ನೇ), ವಿರೋಧ ಪಕ್ಷದ ನಾಯಕಿ ಯಾಗಿ ಅನುಷಾ(5ನೇ) ಆಯ್ಕೆಯಾದರು. ಉಳಿದಂತೆ ಶಾಲಾ ಶಿಕ್ಷಣ ಮತ್ತು ಆರೋಗ್ಯ ಮಂತ್ರಿಯಾಗಿ ಪ್ರೀತಮ್(5ನೇ), ಕ್ರೀಡಾ ಮಂತ್ರಿಯಾಗಿ ಅದ್ವಿತ್(5ನೇ), ನೀರಾವರಿ ಮಂತ್ರಿ ಯಾಗಿ ಅಭೀಷ್(4ನೇ) ಆಯ್ಕೆಯಾದರು. ಗ್ರಂಥಾಲಯ ಮತ್ತು ಸ್ವಚ್ಛತಾ ಮಂತ್ರಿಗಳ ಹೆಚ್ಚುವರಿ ಜವಾಬ್ದಾರಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ವಹಿಸಲಾಯಿತು. ಚುನಾವಣೆ ಪ್ರಕ್ರಿಯೆಯಲ್ಲಿ ಶಾಲಾ ಶಿಕ್ಷಕರು ನಡೆಸಿಕೊಟ್ಟರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya
error: Content is protected !!