August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವಸಂಖ್ಯಾತ ದಿನಾಚರಣೆಯನ್ನು ನಡೆಸಲಾಯಿತು.

ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ದಾನಿಗಳು ನೀಡಿದ ತಬಲವನ್ನು ತಬಲ ಗುರುಗಳಾದ ವಿನಾಯಕ ಬಾಳಿಗ, ಹಾರ್ಮೋನಿಯಂ ಅನ್ನು ಲಕ್ಷ್ಮೀನಾರಾಯಣ ರಾವ್ ಹಾಗೂ ಕೀ ಬೋರ್ಡ್ ಇದನ್ನು ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ನುಡಿಸುವುದರ ಮೂಲಕ ಮುಂಬರುವ ದಿನಗಳಲ್ಲಿ ಪಕ್ಕ ವಾದ್ಯಗಳ ತರಬೇತಿಗಳಿಗೂ ಸಹ ವಿದ್ಯುಕ್ತ ಚಾಲನೆಯನ್ನು ನೀಡಿದರು.

ಬಳಿಕ ಮಾತನಾಡಿದ ಅವರುಗಳು ವಿದ್ಯಾರ್ಥಿ ಜೀವನದಲ್ಲಿ ಸಂಗೀತದ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹತ್ವವನ್ನು, ಓದಿನ ಜೊತೆಗಿನ ಇಂತಹ ಚಟುವಟಿಕೆಗಳು ಆಧುನಿಕ ಜಗತ್ತಿಗೆ ಯಾಕೆ ಬೇಕು ವಿಚಾರಗಳನ್ನು ವಿವರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಂಗೀತ ಕಚೇರಿ ಕೊಳಲು ವಾದನ ಹಾಗೂ ಕೀಬೋರ್ಡ್ ನುಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಆ ಮೂಲಕ ವಿಶ್ವ ಸಂಗೀತ ದಿನವನ್ನು ಆಚರಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಲ್ಲಿನಾಥ್ ಜೈನ್, ಶಂಬು ಶಂಕರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಅವರ ಮಾರ್ಗದರ್ಶನದಲ್ಲಿ ಮೂಡಿ ಬಂದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!