ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿ ಬಳಂಜ ಅವರನ್ನು ಸಂಘದ ವಠಾರದಲ್ಲಿ ಜೂ 21ರಂದು ಗೌರವಿಸಲಾಯಿತು.

ಜೊತೆಗೆ ಸಂಘದ ವತಿಯಿಂದ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿ, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯೆ ಮನ್ವಿತಾ ಪೂಜಾರಿಯವರಿಗೆ ಅವರಿಗೆ ವಿದ್ಯಾರ್ಥಿ ವೇತನ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಾರ್ಯದರ್ಶಿ ರಂಜಿತ್ ಪೂಜಾರಿ, ನಿರ್ದೇಶಕ ಸಂತೋಷ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಸದಸ್ಯ ಹರೀಶ್ ವೈ ಚಂದ್ರಮ ಹಾಗೂ ಇತರರು ಉಪಸ್ಥಿತರಿದ್ದರು.













