June 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

ಬಂಟ್ವಾಳ : ಬಾಳ್ತಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಆಡಳಿತ ಮಂಡಳಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀದೇವಳದ ಆಡಳಿತ ಮೊಕ್ತೇಸರರಾದ ಸುಧಾಕರ ಶೆಣೈ ಮರೋಳಿ ನೆರವೇರಿಸಿದರು. ಯೋಗ ಕಾರ್ಯಕ್ರಮವನ್ನು ಪ್ರಾತ್ಯಕ್ಷಿಕೆ ಮೂಲಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯವಾಹಕ ಡಾಕ್ಟರ್ ಜಯಪ್ರಕಾಶ್ ನಾಯಕ್ ಮೋನಡ್ಕ, ಬೆಂಗಳೂರು ನಡೆಸಿಕೊಟ್ಟರು.

ಕಾರ್ಯಕ್ರಮದ ಸ್ವಾಗತ ಹಾಗೂ ಪ್ರಸ್ತಾವನೆಯನ್ನು ಡಾಕ್ಟರ್ ವಿಜಯಲಕ್ಷ್ಮಿ ನಾಯಕ್ ನೇರಳಕೋಡಿ ರವರು ನಿರ್ವಹಿಸಿದರು. ರಾಜ್ಯಮಟ್ಟದ ಯೋಗ ಪಟುಗಳಾದ ಸಾನ್ವಿ ನಾಯಕ್ ಮೈರಾ ಹಾಗೂ ದೀಕ್ಷ ಪ್ರಭು ಕೆಮ್ಮಾಯಿ ರವರು ವಿಶೇಷ ಯೋಗ ಆಸನಗಳನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಡಾಕ್ಟರ್ ಭುವನೇಶ್ ಶಾನಭಾಗ್ ಬೆಂಗಳೂರು, ಡಾ ಶಿವಪ್ರಕಾಶ್ ಮೋನಡ್ಕ, ದೇವಳದ ಆಡಳಿತ ಮಂಡಳಿಯ ಕಾರ್ಯದರ್ಶಿ ರಮೇಶ್ ನಾಯಕ್ ಗುಂಡೂರು, ಅನುವಂಶಿಕ ಮೊಕ್ತೇಸರರಾದ ಕಂಟಿಕ ವೆಂಕಟ್ರಾಯ ಶೆಣೈ, ಮಾಜಿ ಮೊಕ್ತೇಸರರಾದ ಕಂಟಿಕ ಗೋಪಾಲ ಶೆಣೈ, ಸುಧಾಕರ ಪ್ರಭು ಪೆರ್ಮರೋಡಿ, ಮೊಕ್ತೇಸರರಾದ ನಿತ್ಯಾನಂದ ಭಟ್ ಬರೆಪ್ಪಾಡಿ, ಚಂದ್ರಶೇಖರ್ ಪ್ರಭು ಹೆಣ್ಣೂರು, ಕಶೆಕೋಡಿ ರಾಘವೇಂದ್ರ ನಾಯಕ್, ಸಂದೀಪ್ ಪ್ರಸಾದ್ ಕಡಂಬು, ಸಚಿನ್ ಇಂದಾಜೆ, ಮಾನಸ ನಾಯಕ್ ಮೊದಲಾದವರು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

ಮೊಕ್ತೇಸರರಾದ ದಯಾನಂದ ನಾಯಕ್ ಬೆಳ್ತಂಗಡಿ ವಂದಿಸಿದರು. ಸುಮಾರು 100 ಕ್ಕೂ ಹೆಚ್ಚು ಯೋಗಪಟುಗಳು ಯೋಗಾಸನಗಳನ್ನು ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya
error: Content is protected !!