23.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷತ್( ರಿ) ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಘಟಕ ಇದರ ಆಶ್ರಯದಲ್ಲಿ ಸಾಹಿತ್ಯ ಮೂಲ ಸಾಮಾಜಿಕ ಶಿಷ್ಟಾಚಾರ ಉಪನ್ಯಾಸ ಕಾರ್ಯಕ್ರಮವು ಅಭ್ಯಾಸ ಪದವಿ ಪೂರ್ವ ಕಾಲೇಜು ಪ್ರಗತಿನಗರ ಕಾಶಿಬೆಟ್ಟು ಇಲ್ಲಿ ನಡೆಯಿತು.

ಸಾಹಿತ್ಯ ಮೂಲ ಸಾಮಾಜಿಕ ಶಿಷ್ಟಾಚಾರದ ಬಗ್ಗೆ, ಸಂಪನ್ಮೂಲ ವ್ಯಕ್ತಿ ಡಾ ಎಮ್.ಎನ್. ರವಿ ಮಂಡ್ಯ ಇವರು ಕೌಟುಂಬಿಕ ಶಿಷ್ಟಾಚಾರ, ಸಾಮಾಜಿಕ ಶಿಷ್ಟಾಚಾರ, ಔದ್ಯೋಗಿಕ ಶಿಷ್ಟಾಚಾರ ವಿಷಯಗಳ ಬಗ್ಗೆ ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಭ್ಯಾಸ್ ಕಾಲೇಜಿನ ಅಧ್ಯಕ್ಷ ಎಂ ಎಸ್ ಕಾರ್ತಿಕೇಯ ಇವರು ಇಂದಿನ ದಿನಮಾನದಲ್ಲಿ ಬೇಕಾದ ಶಿಷ್ಟಾಚಾರದ ಅವಶ್ಯಕತೆಗಾಗಿ ಈ ಕಾರ್ಯಕ್ರಮ ತುಂಬಾ ಅತ್ಯವಶ್ಯ ಎಂದರು. ಇದೇ ಸಂದರ್ಭ ಅಭ್ಯಾಸ್ ಕಾಲೇಜಿನ ಸ್ಟಡಿ ಮೆಟೀರಿಯಲ್ ಅನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ ಗೈದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ಅಧ್ಯಕ್ಷ ಪ್ರೊ ಗಣಪತಿ ಕುಳ ಮರ್ವ ಸ್ವಾಗತಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಸ್ತಾವನೆ ಗೈದರು.

ಅಭಾಸಾಪ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಅಡೂರ್, ಸಮಿತಿ ಸದಸ್ಯೆ ಅಕ್ಷತಾ ಅಡೂರ್ ಕಾರ್ಯಕ್ರಮ ಕ್ಕೆ ಸಹಕರಿಸಿದರು. ಅಭಾಸಾಪ ಸಮಿತಿ ಸದಸ್ಯರಾದ ತ್ರಿವಿಕ್ರಮ ಹೆಬ್ಬಾರ್, ಅಭ್ಯಾಸ್ ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರ ಶೇಖರ್ ಗೌಡ, ಇತರ ಉಪನ್ಯಾಸಕರು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.


ಅಭಾಸಾಪ ಜತೆಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿದರು, ಸುದೀರ್‌ ಧನ್ಯವಾದವನ್ನಿತ್ತರು.

Related posts

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಹಿಂದೂ ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ : ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya
error: Content is protected !!