August 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

ಬೆಳ್ತಂಗಡಿ ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆಗಾಗಿ ಚುನಾವಣಾ ಪ್ರಕ್ರಿಯೆಯನ್ನು ಜೂ.೮ರಂದು ನಡೆಸಲಾಯಿತು.

ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣಾ ಪದ್ಧತಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ದೇಶದ ಚುನಾವಣಾ ಮಾದರಿಯಲ್ಲಿಯೇ ಇವಿಎಂ ಮಿಷಿನ್ ಆಪ್ ಮೂಲಕ ಮೊಬೈಲ್‌ನಲ್ಲಿ ಮತದಾನ ಪ್ರಕ್ರಿಯೆಯನ್ನು ಆಯೋಜಿಸಲಾಯಿತು. ಚುನಾವಣಾ ಪ್ರಕ್ರಿಯೆಯು ಸಂಪೂರ್ಣವಾಗಿ ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ಜರುಗುವಂತೆ ವ್ಯವಸ್ಥೆ ಮಾಡಲಾಯಿತು.

ಶಾಲೆಯ ಚುನಾವಣಾ ಅಧಿಕಾರಿಗಳಾಗಿ ಶಾಲಾ ಮುಖ್ಯ ಶಿಕ್ಷಕ ಪಿ. ಶಿವಾನಂದ ಭಂಡಾರಿ ಅವರು ಮಾರ್ಗದರ್ಶನ ನೀಡಿ, ಶಾಲೆಯ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಅರ್ಥಮಾಡಿಕೊಳ್ಳುವ ಅವಕಾಶ ಪಡೆದರು.

ಮಧ್ಯಾಹ್ನದ ನಂತರ ಮತ ಎಣಿಕೆ ಕಾರ್ಯವನ್ನು ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಾಯಿತು. ಶಾಲಾ ಮಂತ್ರಿಮAಡಲದ ನಾಯಕಿಯಾಗಿ ಗಣ್ಯಶ್ರೀ, ಉಪನಾಯಕನಾಗಿ ಲೋಹಿತ್ ಆಯ್ಕೆಯಾಗಿರುತ್ತಾರೆ.

ಇತರ ಮಂತ್ರಿಗಳಾದ ಶಿಕ್ಷಣ ಮಂತ್ರಿಯಾಗಿ ಯಶ್ವಿನ್ ವೈ ಶೆಟ್ಟಿ, ಅನೂಫ್ ಅಲಿ, ಗೃಹ ಮಂತ್ರಿಯಾಗಿ ಪೂರ್ಣೇಶ, ಶರಣಪ್ಪ, ಹಣಕಾಸು ಮಂತ್ರಿಯಾಗಿ ಪಂಚಮಿ, ವಿಲಾಸ್, ಆರೋಗ್ಯ ಮಂತ್ರಿಯಾಗಿ ಶ್ರೀಶಾಂತ್, ಆರ್ಯನ್, ಆಹಾರ ಮಂತ್ರಿಯಾಗಿ ಆರವ್, ವರ್ಷಿತಾ, ಕ್ರೀಡಾ ಮಂತ್ರಿಯಾಗಿ ಸಹನ್ ಬೋಧ್, ಪ್ರೀತಮ್, ರಕ್ಷಣಾ ಮಂತ್ರಿಯಾಗಿ ವೈ. ರೋಹಿತ್, ಅಭಿಷೇಕ್, ನೀರಾವರಿ ಮಂತ್ರಿಯಾಗಿ ಸುಜನ್, ಮಹಮ್ಮದ್ ಹಫೀಝು, ವಾರ್ತಾ ಮಂತ್ರಿಯಾಗಿ ಯಶ್ವಿತ್, ಫಾತಿಮತ್ ಶಿಫಾನ, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ರಶಾನ, ಹವೀಶ್ ಶೆಟ್ಟಿ, ಕಾನೂನು ಮಂತ್ರಿಯಾಗಿ ನೀರಜ್, ಫಾತಿಮತ್ ಹಿಬಾ, ಗ್ರಂಥಾಲಯ ಮಂತ್ರಿಯಾಗಿ ಸಿರಿ, ಶೈವಿ. ಪಿ. ಶೆಟ್ಟಿ, ತೋಟಗಾರಿಕಾ ಮಂತ್ರಿಯಾಗಿ ಮನೀಶ್, ತೇಜಸ್, ವಿರೋಧ ಪಕ್ಷದ ನಾಯಕಿಯಾಗಿ ವರ್ಷಿತಾ ಆಯ್ಕೆಯಾದರು.

ನೂತನವಾಗಿ ಆಯ್ಕೆಯಾದ ಶಾಲಾ ಮಂತ್ರಿಮಂಡಲದ ಪದಾಧಿಕಾರಿಗಳು ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

Related posts

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya
error: Content is protected !!