June 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ : ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರೌಢ ಶಾಲಾ ಮಂತ್ರಿ ಮಂಡಳದ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.

ಮುಖ್ಯ ಅತಿಥಿಗಳಾದ ಶಾಲೆಯ ಮುಖ್ಯ ಶಿಕ್ಷಕಿ ಭ| ಮೋಲಿ ಡಿಕುನ್ಹ, ಮ್ಯಾನೇಜರ್ ಭಗಿನಿ ತೆರೇಸಿಯ ಶೇರಾ ಶಿಕ್ಷಕರು, ಕಥೋಲಿಕ್ ಕೊಆಪರೇಟಿವ್ ಸೊಸೈಟಿಯ ನಿರ್ದೇಶಕ ವಿನ್ಸೆಂಟ್ ಪಿಂಟೋ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಆಲ್ವಿನ್ ಜೋನ್ ಭಾಗವಹಿಸಿದರು.


ಮುಖ್ಯ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉಪ ಪ್ರಾಂಶುಪಾಲರಾದ ಭಗಿನಿ ಸಹಾಯ ಮೇರಿ ಸ್ವಾಗತಿಸಿದರು . ಬಳಿಕ ಶಾಲಾ ನಾಯಕ ಹತ್ತನೇ ತರಗತಿಯ ವಂಶಿಕ್ ಹೆಚ್ ಬಿ, ಉಪನಾಯಕಿ ಒಂಬತನೇ ತರಗತಿಯ ಶರಲ್ ಪೌಲ್ ಹಾಗೂ ವಿವಿಧ ಮಂತ್ರಿ ಸ್ಥಾನಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿ ತಮ್ಮ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡಿದರು.

ಮುಖ್ಯ ಶಿಕ್ಷಕರು ಹಾಗೂ ಮುಖ್ಯ ಅತಿಥಿಗಳು ಮಾತನಾಡಿ, ಶಾಲಾ ಮಂತ್ರಿ ಮಂಡಳವು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಶಾಲೆಯ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ನೂತನ ಮಂತ್ರಿ ಮಂಡಳದ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿ ವಿಜ್ಞಾನ ವಿಭಾಗದ ಉಪನ್ಯಾಸಕಿ ಹಂಸಶ್ರೀ ವಂದನಾರ್ಪಣೆಗೈದರು.

Related posts

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya
error: Content is protected !!