June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರ ಭೇಟಿ

ಬೆಳ್ತಂಗಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರನ್ನು ಜೂ.23 ರಂದು ಸೇವಾಭಾರತಿ ತಂಡದಿಂದ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿಯ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ ಅವರು, 2011ರ ಸರ್ಕಾರದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ (Persons with Spinal Cord Injury – PwSCI) ಅಗತ್ಯವಿರುವ ವೈದ್ಯಕೀಯ ಸ್ವಯಂ ಆರೈಕೆ (Medical Self-Care) ಕಿಟ್‌ಗಳು ಹಾಗೂ ಸಹಾಯಕ ಸಾಧನಗಳನ್ನು ಸರ್ಕಾರದಿಂದ ಒದಗಿಸಬೇಕೆಂದು ಮನವಿ ಮಾಡಿದರು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ದೈನಂದಿನ ಆರೈಕೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ಈ ಸೌಲಭ್ಯಗಳು ಅತ್ಯಂತ ಅವಶ್ಯಕವಾಗಿವೆ ಎಂದು ಸಚಿವರ ಗಮನಕ್ಕೆ ತಂದರು.

ಮನವಿಯನ್ನು ಸ್ವೀಕರಿಸಿದ ಸಚಿವರು ವಿಷಯವನ್ನು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Related posts

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!