August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

ವೇಣೂರು: ಬಜಿರೆ ಪಿಯಂಶ್ರೀ (PM Schools for Rising India) ಶಾಲೆಯಲ್ಲಿ ಇಂದು ಎಲ್‌ಕೆಜಿ, ಯುಕೆಜಿ ವಿದ್ಯಾರ್ಥಿ ಪೋಷಕರ ಸಭೆಯು ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಲೋಕೇಶ್ ಕೋರ್ಲೋಡಿ ಮಾತನಾಡಿ, ನಿಕಟಪೂರ್ವ ಸಮಿತಿಯ ಕಾರ್ಯಗಳನ್ನು ಶ್ಲಾಘಿಸಿದರು. ಶಾಲೆಯ ಅಭಿವೃದ್ಧಿ, ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ನೂತನ ಸಮಿತಿಗೆ ತಿಳಿಸಿದರು.


ಸಭೆಯಲ್ಲಿ 2026-27ನೇ ಸಾಲಿಗೆ ಎಲ್‌ಕೆಜಿ, ಯುಕೆಜಿ ಅಭಿವೃದ್ಧಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಪುನರಾಯ್ಕೆಯಾದರು. ಸದಸ್ಯರುಗಳಾಗಿ ಕೃಷ್ಣಪ್ಪ ದೇವಾಡಿಗ, ಎಚ್. ಮಲ್ಲಿಕಾರ್ಜುನ್, ಪದ್ಮನಾಭ ಕುಲಾಲ್, ದುಗ್ಗಪ್ಪ ನಾಯ್ಕ್, ರಜಿನಿ ಪಿ., ಸುಷ್ಮಾ ಜೈನ್, ಹರಿಣಿ ಹೆಗ್ಡೆ, ತುಳಸಿ ಜಿ. ಆಯ್ಕೆಯಾದರು.

ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಗೌಡ ಮಾತನಾಡಿ, ಮನೆಯಲ್ಲಿ ಮಕ್ಕಳಿಗೆ ಪೋಷಕರು ಶಿಸ್ತು ಮೂಡಿಸಬೇಕು, ಮಕ್ಕಳ ಎದುರು ಮೊಬೈಲ್ ಬಳಕೆ ಮಿತಿಗೊಳಿಸಬೇಕು ಎಂದ ಅವರು, ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದರು.


ನೂತನ ಅಧ್ಯಕ್ಷ ಜಗನ್ನಾಥ ದೇವಾಡಿಗ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆಯಿತ್ತರು. ಮುಖ್ಯಶಿಕ್ಷಕಿ ರಶ್ಮಿ ಶೆಟ್ಟಿ ಸ್ವಾಗತಿಸಿ, ಶಾಲೆಯ ನಿಯಮಗಳ ತಿಳಿಸಿದರು.
ಎಸ್‌ಡಿಎಂಸಿ ಸದಸ್ಯೆ ಶ್ರೀಮತಿ ಪ್ರಮೀಳಾ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಸಫ್ರಿನಾ ವಂದಿಸಿದರು.

Related posts

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya
error: Content is protected !!