June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ
ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ಉಪ ವಿಭಾಗ, ಬೆಳ್ತಂಗಡಿ ಪೊಲೀಸ್ ಠಾಣೆ ವತಿಯಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಜೂ.23 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೊಲೀಸ್ ಇಲಾಖೆಯಿಂದ ಸಂಗಮಿತ್ರ ಎಂಬ ಸ್ಕ್ಯಾನರ್ ತಂತ್ರಜ್ಞಾನವಿದೆ. ಈ ಮೂಲಕ ಮಾದಕ ವ್ಯಸನಿಗಳ ಬಗ್ಗೆ ನಿಖರವಾಗಿ ತಿಳಿಯಬಹುದಾಗಿದೆ. ಇದರಿಂದ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗುತ್ತದೆ. ಹೆತ್ತವರು ಕಷ್ಟ ಪಟ್ಟು ಶಿಕ್ಷಣ ಒದಗಿಸುತ್ತಾರೆ, ಹಾಗಾಗಿ ಯಾವುದೇ ರೀತಿಯ ಮಾದಕ ದ್ರವ್ಯ ಇರಲಿ ಅದರಿಂದ ದೂರವಿರಿ. ಓದಿನ ಕಡೆ ಗಮನ ಹರಿಸಬೇಕು. ಮಾದಕ ದ್ರವ್ಯದ ಕುರಿತು ಮಾಹಿತಿ ಲಭಿಸಿದಲ್ಲಿ ಚೈಲ್ಡ್ ಹೆಲ್ಪ್ ಲೈನ್ 1098, 112 ಗೂ ಕರೆ ಮಾಡಬಹುದಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಕಾರ್ಯದರ್ಶಿ ಪ್ರಜ್ವಲ್ ರೈ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಉಪ ವಿಭಾಗ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್., ಪೊಲೀಸ್ ಉಪನಿರೀಕ್ಷಕ ಆನಂದ್ ಎಂ., ವಿದ್ವತ್ ಕಾಲೇಜು ಪ್ರಾಂಶುಪಾಲರಾದ ಬಾಲಕೃಷ್ಣ ನಾಯ್ಕ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಅನುಶ್ರೀ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya
error: Content is protected !!