ವೇಣೂರು: ಬಜಿರೆ ಪಿಯಂಶ್ರೀ (PM Schools for Rising India) ಶಾಲೆಯಲ್ಲಿ ಇಂದು ಎಲ್ಕೆಜಿ, ಯುಕೆಜಿ ವಿದ್ಯಾರ್ಥಿ ಪೋಷಕರ ಸಭೆಯು ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಲೋಕೇಶ್ ಕೋರ್ಲೋಡಿ ಮಾತನಾಡಿ, ನಿಕಟಪೂರ್ವ ಸಮಿತಿಯ ಕಾರ್ಯಗಳನ್ನು ಶ್ಲಾಘಿಸಿದರು. ಶಾಲೆಯ ಅಭಿವೃದ್ಧಿ, ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ನೂತನ ಸಮಿತಿಗೆ ತಿಳಿಸಿದರು.
ಸಭೆಯಲ್ಲಿ 2026-27ನೇ ಸಾಲಿಗೆ ಎಲ್ಕೆಜಿ, ಯುಕೆಜಿ ಅಭಿವೃದ್ಧಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಪುನರಾಯ್ಕೆಯಾದರು. ಸದಸ್ಯರುಗಳಾಗಿ ಕೃಷ್ಣಪ್ಪ ದೇವಾಡಿಗ, ಎಚ್. ಮಲ್ಲಿಕಾರ್ಜುನ್, ಪದ್ಮನಾಭ ಕುಲಾಲ್, ದುಗ್ಗಪ್ಪ ನಾಯ್ಕ್, ರಜಿನಿ ಪಿ., ಸುಷ್ಮಾ ಜೈನ್, ಹರಿಣಿ ಹೆಗ್ಡೆ, ತುಳಸಿ ಜಿ. ಆಯ್ಕೆಯಾದರು.
ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಗೌಡ ಮಾತನಾಡಿ, ಮನೆಯಲ್ಲಿ ಮಕ್ಕಳಿಗೆ ಪೋಷಕರು ಶಿಸ್ತು ಮೂಡಿಸಬೇಕು, ಮಕ್ಕಳ ಎದುರು ಮೊಬೈಲ್ ಬಳಕೆ ಮಿತಿಗೊಳಿಸಬೇಕು ಎಂದ ಅವರು, ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದರು.
ನೂತನ ಅಧ್ಯಕ್ಷ ಜಗನ್ನಾಥ ದೇವಾಡಿಗ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆಯಿತ್ತರು. ಮುಖ್ಯಶಿಕ್ಷಕಿ ರಶ್ಮಿ ಶೆಟ್ಟಿ ಸ್ವಾಗತಿಸಿ, ಶಾಲೆಯ ನಿಯಮಗಳ ತಿಳಿಸಿದರು.
ಎಸ್ಡಿಎಂಸಿ ಸದಸ್ಯೆ ಶ್ರೀಮತಿ ಪ್ರಮೀಳಾ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಸಫ್ರಿನಾ ವಂದಿಸಿದರು.












