August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

ಮಂಗಳೂರು: ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಇಂದು(ಜೂ.23) ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ಆಸ್ಪತ್ರೆಯಿಂದ ಮಂಗಳೂರಿನ ಬೆಲ್ಯೆ ಪಲ್ಲಿ (ಝೀನತ್ ಭಕ್ಷ್) ಮಸೀದಿಗೆ ಪಾರ್ಥಿವ ಶರೀರ ರವಾನೆಯಾಗಲಿದೆ. ಬಳಿಕ ಮಸೀದಿಯಲ್ಲಿ ಜನಾಝ ಸ್ನಾನ ಮತ್ತು ಜನಾಝ ನಮಾಝ್ ನಡೆಯಲಿದೆ. ಬಳಿಕ‌ ಕಾಸರಗೋಡಿನ ಅವರ ಮನೆಗೆ ಪಾರ್ಥಿವ ಶರೀರ ರವಾನೆಯಾಗಲಿದೆ.

ಕಾಸರಗೋಡು ಮನೆಯಲ್ಲಿ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮೂಡುಬಿದಿರೆಯ ಕಾಶಿಪಟ್ಣದ ದಾರುನ್ನೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಬಂಧುಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!