June 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ
ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ಉಪ ವಿಭಾಗ, ಬೆಳ್ತಂಗಡಿ ಪೊಲೀಸ್ ಠಾಣೆ ವತಿಯಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಜೂ.23 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೊಲೀಸ್ ಇಲಾಖೆಯಿಂದ ಸಂಗಮಿತ್ರ ಎಂಬ ಸ್ಕ್ಯಾನರ್ ತಂತ್ರಜ್ಞಾನವಿದೆ. ಈ ಮೂಲಕ ಮಾದಕ ವ್ಯಸನಿಗಳ ಬಗ್ಗೆ ನಿಖರವಾಗಿ ತಿಳಿಯಬಹುದಾಗಿದೆ. ಇದರಿಂದ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗುತ್ತದೆ. ಹೆತ್ತವರು ಕಷ್ಟ ಪಟ್ಟು ಶಿಕ್ಷಣ ಒದಗಿಸುತ್ತಾರೆ, ಹಾಗಾಗಿ ಯಾವುದೇ ರೀತಿಯ ಮಾದಕ ದ್ರವ್ಯ ಇರಲಿ ಅದರಿಂದ ದೂರವಿರಿ. ಓದಿನ ಕಡೆ ಗಮನ ಹರಿಸಬೇಕು. ಮಾದಕ ದ್ರವ್ಯದ ಕುರಿತು ಮಾಹಿತಿ ಲಭಿಸಿದಲ್ಲಿ ಚೈಲ್ಡ್ ಹೆಲ್ಪ್ ಲೈನ್ 1098, 112 ಗೂ ಕರೆ ಮಾಡಬಹುದಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಕಾರ್ಯದರ್ಶಿ ಪ್ರಜ್ವಲ್ ರೈ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಉಪ ವಿಭಾಗ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್., ಪೊಲೀಸ್ ಉಪನಿರೀಕ್ಷಕ ಆನಂದ್ ಎಂ., ವಿದ್ವತ್ ಕಾಲೇಜು ಪ್ರಾಂಶುಪಾಲರಾದ ಬಾಲಕೃಷ್ಣ ನಾಯ್ಕ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಅನುಶ್ರೀ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya
error: Content is protected !!