June 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

ಬೆಳ್ತಂಗಡಿ : ಜನಸೇವೆಯೇ ಮೂಲಮಂತ್ರವನ್ನಾಗಿಸಿಕೊಂಡ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ಬೆಳ್ತಂಗಡಿಯ 28ನೇ ನೂತನ ಶಾಖೆಯು ಗುರುಪುರ-ಕೈಕಂಬದ ಅನಂತ ಮಹಲ್ ಕಾಂಪ್ಲೆಕ್ಸ್ ನಲ್ಲಿ ಜೂ. 19 ರಂದು ಶುಭಾರಂಭಗೊಂಡಿತ್ತು.

ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಭಗೀರಥ ಜಿ. ವಹಿಸಿ ಮಾತನಾಡಿ, ಮಾಜಿ ಸಚಿವ ವಸಂತ ಬಂಗೇರ, ಕೆ.ಜಿ. ಬಂಗೇರ ಮತ್ತು ಪದ್ಮನಾಭಎನ್. 2008ರಲ್ಲಿ ಈ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಇಂದು ನಮ್ಮ ಸಂಸ್ಥೆ ಉನ್ನತ ಮಟ್ಟಕ್ಕೇರಿ ಸಹಾಕರ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡುತ್ತಿದೆ. ಲಾಭದ ಉದ್ದೇಶದಿಂದ ಸಂಸ್ಥೆಯನ್ನು ಮಾಡಿಲ್ಲ. ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುತ್ತೇವೆ. ಸಂಘದ ಐದು ಶಾಖೆಗಳು ಮತ್ತು ಕೇಂದ್ರ ಕಚೇರಿ ಸ್ವಂತ ಮಾಲೀಕತ್ವದ ಮೂಲಕ ಠೇವಣಿದಾರರಿಗೆ ಧೈರ್ಯ ನೀಡುವ ವ್ಯವಸ್ಥೆ ನಮ್ಮಲ್ಲಿದೆ ಎಂದರು.

ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ಎಸ್‌ಆರ್‌ಆರ್ ಮಸಾಲ ಇಂಡಸ್ಟ್ರೀಸ್ ಎಂಡಿ ಶೈಲೇಂದ್ರ ಸುವರ್ಣ ಮಾತನಾಡಿ, ಈ ಸಂಸ್ಥೆ ಹಲವಾರು ಕುಟುಂಬಗಳನ್ನು ಬೆಳಗುವಂತೆ ಮಾಡಿದೆ ಎಂದರು.

ಭದ್ರತಾ ಕೋಶವನ್ನು ಉದ್ಘಾಟಿಸಿದ ಕೈಕಂಬ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿನೋದ್ ಮಾಡ, ತಾ.ಪಂ. ಮಾಜಿ ಸದಸ್ಯ ಸುನಿಲ್ ಶುಭಹಾರೈಸಿದರು.
‘ಹೊಟೇಲ್ ಶ್ರೀರಾಮ್’ ಕೈಕಂಬದ ಮಾಲಕ ಹರಿರಾವ್ ಗಣಕ ಯಂತ್ರ ಉದ್ಘಾಟಿಸಿದರು. ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ನಿರಖು ಠೇವಣಿ ಪತ್ರ, ಗಂಜಿಮಠ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಮಾಲತಿ ಎಂ ಉಳಿತಾಯ ಖಾತೆ ಪುಸ್ತಕವನ್ನು ವಿತರಿಸಿದರು.

ಮುಖ್ಯ ಅತಿಥಿಯಾಗಿ ಗುರುಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್, ಉದ್ಯಮಿಗಳಾದ ರೋಮನ್ಸ್‌ ಬೇಸಿಲ್ ಲೋಬೋ, ಗೋಪಾಲಕೃಷ್ಣ ಕೆ., ಎಂ.ಎಫ್. ಮುಸ್ತಾಫಾ, ಸತೀಶ್ಚಂದ್ರ ಇರುವೈಲು ಪಾಣಿಲ, ರಾಜೇಶ್ ಪೈ, ಸುನಿಲ್, ಕಂದಾವರ ಶ್ರೀ ನಾರಾಯಣ ಗುರು ಸ್ವಾಮಿಸೇವಾಸಂಘದ ಅಧ್ಯಕ್ಷ ದಿನೇಶ್, ಮಳಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಅಧ್ಯಕ್ಷ ಕೇಶವ ಪೂಜಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಬೂಬ ಪೂಜಾರಿ ಮಳಲಿ, ಜಿ.ಪಂ. ಮಾಜಿ ಸದಸ್ಯ ಕೃಷ್ಣಅಮೀನ್, ಸಂಸ್ಥೆಯ ನಿರ್ದೇಶಕರಾದ ಸುಜಿತಾ ಬಂಗೇರ, ತನುಜಾ ಶೇಖರ್, ಸಂಜೀವ ಪೂಜಾರಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಸರ್ವೆದೋಳ, ಗಂಗಾಧರ ಮಿತ್ತಮಾರು, ಚಿದಾನಂದ ಪೂಜಾರಿ, ಬೆಳ್ತಂಗಡಿ ಗುರುನಾರಾಯಣ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಕಟ್ಟಡ ಮಾಲಕ ರಾಜೇಶ್ ಪೈ ಪರವಾಗಿ ಪುತ್ರ ಆದಿತ್ಯ ಪೈ ಅವರನ್ನು ಸಮ್ಮಾನಿಸಲಾಯಿತು. ಸಹಕರಿಸಿದ ವರಿಗೆ ಕೃತಜ್ಞತಾ ಪತ್ರ ನೀಡಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ. ಸ್ವಾಗತಿಸಿದರು.

ವಿಶೇಷಾಧಿಕಾರಿ ಮೋನಪ್ಪ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್ ನಿರೂಪಿಸಿ, ನಿರ್ದೇಶಕರಾದ ಚಂದ್ರಶೇಖರ್ ವಂದಿಸಿದರು. ಕೇಂದ್ರ ಕಚೇರಿ ಅಧಿಕಾರಿ ವರ್ಗ, ಇತರ ಶಾಖೆಗಳ ಶಾಖಾ ವ್ಯವಸ್ಥಾಪಕರುಗಳು, ಕೈಕಂಬ ಶಾಖೆಯ ಶಾಖಾ ವ್ಯವಸ್ಥಾಪಕಿ ಹರಿಣಾಕ್ಷಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!