August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಜಂಟಿ ಪ್ರಾಯೋಜಕತ್ವದಲ್ಲಿ ಪ್ರಾಂಶುಪಾಲರಾದ ಡಾ ಪ್ರಶಾಂತ್ ಶೆಟ್ಟಿ ಹಾಗೂ ರಾಷ್ಟ್ರೀಯ ಸೇವಾ ಸಂಘದ ಅಧಿಕಾರಿ ಡಾ. ಶಾಲ್ಮಲಿ ಸುನಿಲ್ ವರ ಮಾರ್ಗದರ್ಶನದಲ್ಲಿ  ಜೂನ್ 15 ರಿಂದ 20, 2026ರವರೆಗೆ ಉಜಿರೆ ಹಾಗೂ ಸುತ್ತಮುತ್ತಲಿನ ವಿವಿಧ ಸಂಸ್ಥೆಗಳಲ್ಲಿ ಉಚಿತ ಯೋಗ ಶಿಬಿರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಶಿಬಿರದ ಪ್ರಯುಕ್ತ ನಿಡ್ಲೆ ಗ್ರಾಮಪಂಚಾಯತ್ ಹಾಗೂ ಎಸ್ ಡಿ ಎಂ ಪಿಯುಸಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಜಂಟಿ ಪ್ರಾಯೋಜಕತ್ವದಲ್ಲಿ ಡಾ ಹರ್ಷಿಣಿ ಅವರು ವೃದ್ಧಾಪ್ಯದಲ್ಲಿ ಯೋಗದ ಪಾತ್ರದ ಬಗ್ಗೆ ಉಪನ್ಯಾಸ ನೀಡಿರುತ್ತಾರೆ.

ಶಿಬಿರದ ಅಂಗವಾಗಿ ನಿಡ್ಲೆ ಗ್ರಾಮದ ಸಂಜೀವಿನಿ ಮಹಿಳಾ ಸಂಘದ ಸದಸ್ಯರಿಗೆ, ಬ್ಯಾಂಕ್ ಆಫ್ ಬರೋಡ, ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಬೆಳ್ತಂಗಡಿ ಮಹಿಳಾ ಕೋ-ಆಪರೇಟಿವ್ ಸೊಸೈಟಿಯ ಉದ್ಯೋಗಿಗಳಿಗೆ ಯೋಗ ತರಬೇತಿ ನೀಡಲಾಯಿತು. ಅಲ್ಲದೆ ಅಮೃತ್ ಸಿಲ್ಕ್, ಬೇಬಿ ಸ್ಕ್ವೇರ್ ಬಟ್ಟೆ ಮಳಿಗೆಗಳ ಸಿಬ್ಬಂದಿ, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಿಬ್ಬಂದಿಗೂ ಉಚಿತ ಯೋಗಾಭ್ಯಾಸವನ್ನು ಕಲಿಸಲಾಯಿತು.

ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಸುಮಾರು 150 ಮಂದಿ ಭಾಗವಹಿಸಿ ಪ್ರಯೋಜನ ಪಡೆದರು. ಭಾಗವಹಿಸಿದವರು ಯೋಗಾಭ್ಯಾಸದ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಅರಿವು ಪಡೆದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya
error: Content is protected !!