June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನೋಡಿ  ಸ.ಉ. ಪ್ರಾ. ಶಾಲೆಯಲ್ಲಿ  ನವೀಕೃತ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಉದ್ಘಾಟನೆ

ಲಾಯಿಲ: ಕರ್ನೋಡಿ  ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ನವೀಕರಣಗೊಂಡ ಎಲ್. ಕೆ. ಜಿ ಮತ್ತು ಯು. ಕೆ. ಜಿ ತರಗತಿ ಕೊಠಡಿಯ  ಉದ್ಘಾಟನಾ ಕಾರ್ಯಕ್ರಮವು ಜೂ.  22  ರಂದು ಶಾಲೆಯಲ್ಲಿ ನಡೆಯಿತು. 

ಕೊಠಡಿ ಉದ್ಘಾಟನೆಯನ್ನು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಸಂಚಾಲಕ  ಮೋಹನ್ ಕುಮಾರ್  ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷೆ  ಸೌಮ್ಯಾ  ವಹಿಸಿದ್ದರು. 

ಮುಖ್ಯ ಅಥಿತಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಸುರೇಶ್ ಶೆಟ್ಟಿ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ನಿಯೋಜಿತ ಅಧ್ಯಕ್ಷ ಶ್ರೀಧರ್ ಕೆ.ವಿ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಸಂತೋಷ್ ಕುಮಾರ್, ಗ್ರಾಮ ಪಂಚಾಯತ್ ಅಭಿವೃದಿ ಅಧಿಕಾರಿ ತಾರಾನಾಥ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ  ಧನಂಜಯ್ ರಾವ್, ಶಾಲಾ ಮುಖ್ಯೋಪಾಧ್ಯಾಯರಾದ   ಜಗನ್ನಾಥ್. ಎಮ್  ಉಪಸ್ಥಿತರಿದ್ದರು.

ಎಲ್. ಕೆ. ಜಿ ಮತ್ತು ಯು.ಕೆ.ಜಿ  ತರಗತಿಯ ಪುಟಾಣಿ ಮಕ್ಕಳಿಗೆ ಮೋಹನ್ ಕುಮಾರ್  ರವರು ಬ್ಯಾಗ್ ಮತ್ತು ಕೊಡೆಯನ್ನು ಉಚಿತವಾಗಿ ವಿತರಿಸಿದರು. ಕೊಠಡಿ ನವೀಕರಣಕ್ಕೆ ಸಹಕರಿಸಿದ ದಾನಿಗಳನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಗೌರವಿಸಲಾಯಿತು. ಸಹ ಶಿಕ್ಷಕಿ ಉಷಾ. ಕೆ. ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಧನಂಜಯ ರಾವ್ ಸ್ವಾಗತಿಸಿದರು. ಸಹ ಶಿಕ್ಷಕ ಕೃಷ್ಣ ಕುಮಾರ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಬಾಲಕೃಷ್ಣ  ನೈಮಿಷಾ  ಸೌತಡ್ಕ, ಪ್ರವೀಣ್ ಶೆಟ್ಟಿ, ವೆಂಕಟೇಶ್ ಕಾಶಿಬೆಟ್ಟು, ಮುರಳಿ, ಬೆನಕಾ ಎಲೆಕ್ಟ್ರಿಕಲ್ಸ್, ಪ್ರಕಾಶ್ ಜೈನ್ ಬಳೆಂಜ, ಮೊಹಮದ್ ಅಲೀ ಕಕ್ಕೇನ, ಸುಜಿತ್ ಗುರಿಂಗಾನ, ಕರೀಂ ಹಾಜಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್.ಆರ್ ಕೋಶಾಧಿಕಾರಿ ಸದಾಶಿವ ಸಮಗಾರ, ಉಪಾಧ್ಯಕ್ಷರಾದ ಆಶ್ರಫ್ ಮಾಂಜಾಲ್, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಶ್ರೀಮತಿ ದಿವ್ಯ, ಮತ್ತು ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾ ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ& ರಕ್ತದಾನ ಶಿಬಿರ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya
error: Content is protected !!