ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಇಲ್ಲಿ ವಿವಿಧ ಸಂಘಗಳ ಉದ್ಘಾಟನೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯ ಲೆಕ್ಕಾಧಿಕಾರಿ ಪುರಂದರ ಭಟ್ ರವರು ಶಾಲೆಗಳಲ್ಲಿ ಸಂಘಗಳ ರಚನೆ ಮಾಡಿ ಬೇರೆ ಬೇರೆ ಸಂಘಗಳ ಪರಿಕಲ್ಪನೆಯನ್ನು ಮೂಡಿಸಿ ಆ ವಿದ್ಯಾರ್ಥಿಯು ಮುಂದೊಂದು ದಿನ ಉತ್ತಮ ಪ್ರಜೆಯಾಗಿ ಬೆಳೆಯಲು ಸಾಧ್ಯ, ಅದೇ ರೀತಿ ಇಂತಹ ಸಂಘಗಳಿಂದ ಪರಿಸರ ಜಾಗೃತಿ, ವಿಜ್ಞಾನದ ಕುತೂಹಲ, ಭಾರತೀಯ ಸಂಸ್ಕೃತಿ, ಸಾಹಿತ್ಯಗಳನ್ನು ತಿಳಿಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸಂಘಗಳು ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿಯವರು ಉಪಸ್ಥಿತರಿದ್ದರು.
ವಿವಿಧ ಸಂಘಗಳ ಜವಾಬ್ದಾರಿಯನ್ನು ಶಾಲಾ ಶಿಕ್ಷಕ ಪವನ್ ಕುಮಾರ್ ತಿಳಿಸಿಕೊಟ್ಟರು . ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ನಿಶಾಂತ್ ಕುಮಾರ ಸ್ವಾಗತಿಸಿ ಕು. ಜಿತೀಕ್ಷಾ ಧನ್ಯವಾದವಿತ್ತರು. ಶಾಲಾ ಶಿಕ್ಷಕಿ ಪುಷ್ಪಲತಾ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.












