ಪುದುವೆಟ್ಟು : ಸ್ಥಳೀಯ ಶ್ರೀಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದು(ಜೂ.23) ಪೋಷಕರು ಮತ್ತು ಶಿಕ್ಷಕರ ಸಹಭಾಗಿತ್ವದಲ್ಲಿ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಸುಮಾರು 60ಕ್ಕೂ ಹೆಚ್ಚು ಪೋಷಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದು ಶಾಲೆಯ ಆವರಣದಲ್ಲಿ ಬೆಳೆದಿದ್ದ ಕಳೆ ಗಿಡಗಳನ್ನು ತೆರವುಗೊಳಿಸಿ, ಶಾಲಾ ಪರಿಸರವನ್ನು ಸುಂದರಗೊಳಿಸಲಾಯಿತು.
ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಹಾಗೂ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಶಿಧರ ಜಿ ವಹಿಸಿದ್ದರು. ಶಾಲೆಯ ಎಲ್ಲಾ ಶಿಕ್ಷಕರು ಶ್ರಮದಾನದಲ್ಲಿ ಭಾಗವಹಿಸಿ ಪೋಷಕರೊಂದಿಗೆ ಕೈಜೋಡಿಸಿದರು. ಸಮುದಾಯ ಮತ್ತು ಶಾಲೆಯ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸ್ತುತ್ಯಾರ್ಹ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.












