August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ಪಿಂಟೋ ಕಾಂಪ್ಲೆಕ್ಸ್ನಲ್ಲಿ ಕಾರ್ಯಚರಿಸುತ್ತಿದ್ದ ಕರ್ನಾಟಕ ಒನ್ ಸ್ಥಳಾಂತರಗೊಂಡು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಎರಡನೇ ಮಹಡಿಯಲ್ಲಿ ಜೂ.24ರಂದು ಶುಭಾರಂಭಗೊಂಡಿತು.

ತಿಂಗಳಾಡಿಯ ಹಾಜಿ ಉಮ್ಮರ್ ಮುಸ್ಲಿಯರ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಜನರಿಗೆ ಸ್ಪಷ್ಟ ಮಾಹಿತಿ ನೀಡಿ ಉತ್ತಮ ಸೇವೆ ನೀಡುವ ಮೂಲಕ ಸಂಸ್ಥೆ ಉನ್ನತವಾಗಿ ಬೆಳೆಯಲಿ. ತತ್ವರಿತ ಸೇವೆಗಳ ಮೂಲಕ ಸರಕಾರದ ನಾನಾ ಯೋಜನೆಗಳನ್ನು ಜನರಿಗೆ ತಲುಪಿಸಿ ಪಾರದರ್ಶಕ ವಾಹಿವಾಟು ನಡೆಯಲಿ ಎಂದು ಶುಭ ಹಾರೈಸಿದರು.

ಬೆಳ್ತಗಂಡಿ ಡಿಕೆಆರ್‌ಡಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಫಾ.ಬಿನೊಯ್ ಎ.ಜೆ., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಮ್, ಮುಖ್ಯಾಧಿಕಾರಿ ಕೆ.ರಾಜೇಶ್, ಆಹಾರ ನಿರೀಕ್ಷಕ ವಿಶ್ವ ಕೆ., ಸಬ್ ರಿಜಿಸ್ಟರ್ ಆಫೀಸರ್ ನಾಗರಾಜ್, ಕರ್ನಾಟಕ ಒನ್ ಜಿಲ್ಲಾ ಸಂಯೋಜಕ ಶಶಿಧರ್ ಟಿ., ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ ಬಿ., ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಟ್ಟಡ ಮಾಲಕ, ಗುರುವಾಯನಕೆರೆ ವಿಕಾಸ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಬೆಳ್ತಂಗಡಿ ಸಿವಿಲ್ ಇಂಜಿನಿರ‍್ಸ್ ಆಫ್ ಕನ್ಸಲ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ., ಬೆಳ್ತಂಗಡಿ ಜಮೀಯತುಲ್ ಫಲಾಹ್ ಅಧ್ಯಕ್ಷ ಖಾಲಿದ್ ಪುಲಾಭೆ, ದೂಮ್ ಧಮಾಕ ಅಬ್ದುಲ್ ರಝಾಕ್ ಹಾಗೂ ಜಿ.ಕೆ.ಸೂಪರ್ ಮಾರ್ಕೆಟ್ ಶರೀಫ್ ಜಿ.ಕೆ. ಉಪಸ್ಥಿತರಿದ್ದರು.

ಪಟ್ಟಣದ ಪಿಂಟೋ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿದ್ದ ನಮ್ಮ ಕರ್ನಾಟಕ ಒನ್ ಕಚೇರಿ ಇದೀಗ ಸ್ಥಳಂತಾರಗೊಂಡು ಶುಭಾರಂಭಗೊಂಡಿದೆ. ನಮಗೆ ಬೆಳ್ತಂಗಡಿಯಲ್ಲಿ ಯಾವುದೇ ಶಾಖೆಗಳು ಇರುವುದಿಲ್ಲ. ಕರ್ನಾಟಕ ಒನ್ ಅಧಿಕೃತ ಪಡಿತರ ಚೀಟಿ ನವಿಕರಣ ಕೇಂದ್ರ ಮತ್ತು ಬಸ್ ಪಾಸ್ ವಿತರಣ ಕೇಂದ್ರವಾಗಿದ್ದು, ಜನರಿಗೆ ಉತ್ತಮ ಸೇವೆ ನೀಡುವುದೇ ನಮ್ಮ ಉದ್ದೇಶವಾಗಿದೆ. -ಅಶ್ರಫ್ ಮಾಲಕರು ಕರ್ನಾಟಕ ಒನ್

Related posts

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!