August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

ಬೆಳ್ತಂಗಡಿ: ಮಲವಂತಿಗೆ-ಮಿತ್ತಬಾಗಿಲು ಭಾಗದಲ್ಲಿ ರೈತರ ಕೃಷಿ ಭೂಮಿ ನಾಶ ಮಾಡಿ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಮೋಹನ್ ಗೌಡ ಆಗ್ರಹ ಮಾಡಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶ ಜನತೆ ಆನೆ ಚಿರತೆ ಹಾವಳಿಯಿಂದ ಜೀವ ಕೈಯಲ್ಲಿ ಹಿಡಿದು ಜೀವನ ನಡೆಸುತ್ತಿದ್ದಾರೆ. ಪ್ರಕೃತಿ ಪರಿಸರ ಸಂರಕ್ಷಣೆಯಲ್ಲಿ ಅವರ ಕೊಡುಗೆ ಕೃಷಿ ಜೀವನ ಮೂಲಕ ಆಗುತ್ತಿದೆ. ಅವರ ಪಾಡಿಗೆ ಅವರು ಜೀವನ ನಡೆಸುತ್ತಿದ್ದಾರೆ ಒಂದು ವೇಳೆ ಕಾನೂನು ರೀತಿ ಅವರನ್ನು ಒಕ್ಕಲು ಎಬ್ಬಿಸಿ ತೊಂದರೆ ಕೊಡುವುದೇ ಆದಲ್ಲಿ ಮೊದಲು ಅವರಿಗೆ ಶಾಶ್ವತ ಪರಿಹಾರವನ್ನು ಭೂಮಿ ನೀಡಿ ಘೋಷಣೆ ಮಾಡಬೇಕಿತ್ತು. ಅದು ಬಿಟ್ಟು ಏಕ ಏಕೀ ಅವರನ್ನು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಯಾವುದೇ ಇರಲಿ ಅದು ಜನಪರ ಕಾರ್ಯಕ್ರಮ ಮಾಡಬೇಕು. ಜನವಿರೋಧಿ ನೀತಿ ಮಾಡಿದ್ದಲ್ಲಿ ಮತ ನೀಡಿದ ಮತದಾರ ವಿರುದ್ಧ ನಿಲ್ಲುವ ದಿನ ದೂರ ಇಲ್ಲ. ಇಲ್ಲಿಯ ಜನ ಕೇಂದ್ರ ಸರ್ಕಾರ ಸಂಸದರಿಗೆ, ಶಾಸಕರಿಗೆ ಮತ ನೀಡಿ ಗೆಲ್ಲಿಸಿದ್ದಾರೆ
ದಯವಿಟ್ಟು ಈ ಬಗ್ಗೆ ಸ್ಥಳ ಪರಿಶೀಲಿಸಿ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸದಾ ಈ ಭಾಗದ ರಸ್ತೆ ಹಾಗೂ ಕೃಷಿಕರ ಧ್ವನಿ ಆಗಿರುವ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರ ಕ್ಕೆ ಒತ್ತಾಯಿಸಿದ್ದಾರೆ.

Related posts

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!