June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

ಬೆಳ್ತಂಗಡಿ: ಮಲವಂತಿಗೆ-ಮಿತ್ತಬಾಗಿಲು ಭಾಗದಲ್ಲಿ ರೈತರ ಕೃಷಿ ಭೂಮಿ ನಾಶ ಮಾಡಿ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಮೋಹನ್ ಗೌಡ ಆಗ್ರಹ ಮಾಡಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶ ಜನತೆ ಆನೆ ಚಿರತೆ ಹಾವಳಿಯಿಂದ ಜೀವ ಕೈಯಲ್ಲಿ ಹಿಡಿದು ಜೀವನ ನಡೆಸುತ್ತಿದ್ದಾರೆ. ಪ್ರಕೃತಿ ಪರಿಸರ ಸಂರಕ್ಷಣೆಯಲ್ಲಿ ಅವರ ಕೊಡುಗೆ ಕೃಷಿ ಜೀವನ ಮೂಲಕ ಆಗುತ್ತಿದೆ. ಅವರ ಪಾಡಿಗೆ ಅವರು ಜೀವನ ನಡೆಸುತ್ತಿದ್ದಾರೆ ಒಂದು ವೇಳೆ ಕಾನೂನು ರೀತಿ ಅವರನ್ನು ಒಕ್ಕಲು ಎಬ್ಬಿಸಿ ತೊಂದರೆ ಕೊಡುವುದೇ ಆದಲ್ಲಿ ಮೊದಲು ಅವರಿಗೆ ಶಾಶ್ವತ ಪರಿಹಾರವನ್ನು ಭೂಮಿ ನೀಡಿ ಘೋಷಣೆ ಮಾಡಬೇಕಿತ್ತು. ಅದು ಬಿಟ್ಟು ಏಕ ಏಕೀ ಅವರನ್ನು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಯಾವುದೇ ಇರಲಿ ಅದು ಜನಪರ ಕಾರ್ಯಕ್ರಮ ಮಾಡಬೇಕು. ಜನವಿರೋಧಿ ನೀತಿ ಮಾಡಿದ್ದಲ್ಲಿ ಮತ ನೀಡಿದ ಮತದಾರ ವಿರುದ್ಧ ನಿಲ್ಲುವ ದಿನ ದೂರ ಇಲ್ಲ. ಇಲ್ಲಿಯ ಜನ ಕೇಂದ್ರ ಸರ್ಕಾರ ಸಂಸದರಿಗೆ, ಶಾಸಕರಿಗೆ ಮತ ನೀಡಿ ಗೆಲ್ಲಿಸಿದ್ದಾರೆ
ದಯವಿಟ್ಟು ಈ ಬಗ್ಗೆ ಸ್ಥಳ ಪರಿಶೀಲಿಸಿ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸದಾ ಈ ಭಾಗದ ರಸ್ತೆ ಹಾಗೂ ಕೃಷಿಕರ ಧ್ವನಿ ಆಗಿರುವ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರ ಕ್ಕೆ ಒತ್ತಾಯಿಸಿದ್ದಾರೆ.

Related posts

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!