June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಕೇಂದ್ರದ ಬಂಧುಗಳಾದ ವಿದುಷಿ ಶ್ರೀಮತಿ ಚೈತ್ರ ಭಟ್, ನಾಟಕ ತರಬೇತುದಾರರಾದ ಯಶವಂತ್ ಹಾಗೂ ಯಕ್ಷಗಾನ ತರಬೇತುದಾರರಾದ ಅರುಣ್ ಭಾಗವಹಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ವಿವಿಧ ಸಂಘಗಳ ಉದ್ಘಾಟನೆ ನೆರವೇರಿತು. ಅತಿಥಿಗಳ ಪರಿಚಯವನ್ನು ಶ್ರೀಮತಿ ಗೀತಾ ಪಿ. ಅವರು ಮಾಡಿಕೊಟ್ಟರೆ, ಸಂಘಗಳ ಸಂಯೋಜಕಿ ಶಿಕ್ಷಕಿ ಶ್ರೀಮತಿ ಚೇತನ ರವರು ಸಂಘಗಳ ಉದ್ದೇಶ ಹಾಗೂ ಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಗಣಿತ ಮತ್ತು ವಿಜ್ಞಾನ ಸಂಘ, ಲಿಟರರಿ ಕ್ಲಬ್, ಇ.ಎಲ್.ಸಿ. ಕ್ಲಬ್, ಎಚ್.ಆರ್.ಡಿ. ಹಾಗೂ ಇಂಟರಾಕ್ಟ್ ಕ್ಲಬ್, ಆರ್ಟ್ ಅಂಡ್ ಕ್ರಾಫ್ಟ್ ಕ್ಲಬ್, ವಾಲ್ ಮ್ಯಾಗಜಿನ್ ಕ್ಲಬ್ ಹಾಗೂ ಕ್ರೀಡಾ ಕ್ಲಬ್‌ಗಳ ವಾರ್ಷಿಕ ಕಾರ್ಯಯೋಜನೆಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಲಾಯಿತು.

ಎಲ್ಲಾ ಕ್ಲಬ್‌ಗಳ ಸಂಯೋಜಕರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಪ್ತಾ ನಿರೂಪಣೆಯಲ್ಲಿ ಸಹಕರಿಸಿದರು. ಸಾನ್ವಿ ಎಸ್. ಬಂಗೇರ ಸ್ವಾಗತಿಸಿ, ರಿತಿಕಾ ಶೈಣೈ ವಂದಿಸಿದರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Related posts

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!