August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ


ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಬದಿಗಳಲ್ಲಿ ಈಗಾಗಲೇ ಗಿಡಗಂಟಿಗಳು ಬೆಳೆದಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಆಗುತ್ತಿದ್ದು ಮತ್ತು ರಸ್ತೆ ಬದಿ ಇರುವ ಚರಂಡಿಗಳಲ್ಲಿ ಹೂಳುಗಳು ತುಂಬಿದ್ದು ಇದರಿಂದ ಮಳೆ ನೀರು ಚರಂಡಿಯಲ್ಲಿ ಹರಿಯದೆ ರಸ್ತೆಯಲ್ಲಿ ಹರಿಯುತ್ತಿದ್ದು ಪ್ರತಿ ವರುಷದಂತೆ ಈ ಬಾರಿಯೂ ಈ ಎರಡು ಕೆಲಸವನ್ನು ತುರ್ತಾಗಿ ಮಾಡಬೇಕೆಂದು ಸಾರ್ವಜನಿಕರ ಪರವಾಗಿ ಇಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧಾಕರ್ ಬಿ.ಎಲ್ , ರುಕ್ಮಯ ಕನ್ನಾಜೆ, ಮಾಜಿ ಉಪಾಧ್ಯಕ್ಷ ಗಿರೀಶ್ ಡೂಂಗ್ರೆ, ಗಣೇಶ್. ಆರ್, ನಿಕಟ ಪೂರ್ವ ಗ್ರಾಮ ಪಂಚಾಯತ್ ಸದಸ್ಯರಾದ ಅರವಿಂದ್ ಕುಮಾರ್, ಹರಿಕೃಷ್ಣ ಪುತ್ರಬೈಲು,ಸಿಎ ಬ್ಯಾಂಕ್ ನಿರ್ದೇಶಕರಾದ ರಮೇಶ್ ನಲಿಕೆ, ಪ್ರಶಾಂತ್ ರಾಮಗಿರಿ, ಮಂಜು ಕನ್ನಾಜೆ, ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!