August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀರಾಮನಿಗೆ ಅವಹೇಳನ: ಪ್ರೊ. ಕೆ. ಎಸ್. ಭಗವಾನ್ ಬಂಧನಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ : ಹಿಂದೂ ಧರ್ಮ, ಪ್ರಭು ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಪ್ರೊ. ಕೆ. ಎಸ್. ಭಗವಾನ್ ಅವರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ರವರ ಮುಖೆನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪ್ರೊ. ಕೆ. ಎಸ್. ಭಗವಾನ್ ಅವರು, ಪ್ರಭು ಶ್ರೀರಾಮನ ಜನನ ಮತ್ತು ಹಿಂದೂ ಧರ್ಮದ ಶ್ರದ್ಧಾಕೇಂದ್ರಗಳು ಹಾಗೂ ಆಚರಣೆಗಳ ಕುರಿತು ಅತ್ಯಂತ ಅಶ್ಲೀಲ, ಧರ್ಮದ್ರೋಹಿ ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿವಾದಾತ್ಮಕ ಮಾತುಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟುಮಾಡಿದೆ. ಇಂತಹ ಪ್ರಚೋದನಾತ್ಮಕ ಹೇಳಿಕೆಗಳು ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕದಡುವ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಬೆಳೆಸುವ ವ್ಯವಸ್ಥಿತ ಸಂಚಾಗಿದೆ ಎಂದು ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂದರ್ಭದಲ್ಲಿ ಧರ್ಮ ಜಾಗರಣ ತಾಲೂಕು ಸಂಯೋಜಕ ತೀಕ್ಷಿತ್ ಕೆ, ವಿಶ್ವಹಿಂದು ಪರಿಷತ್ ತಿಮ್ಮಪ್ಪ ಗೌಡ ಬೆಳಾಲು , ಶಿರ್ಲಾಲು ಗ್ರಾಮ ಸಮಿತಿ ಸದಸ್ಯ ಉಮೇಶ್ ಸುವರ್ಣ, ಇಂದಬೆಟ್ಟು ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು, ಜಯಶಂಕರ್ ಹೆಗ್ಡೆ ವೇಣೂರು, ಅನಿಲ್ ಶೆಟ್ಟಿ ಪೀಳ್ಯ, ಪ್ರವೀಣ್ ಹೆಚ್ ವೇಣೂರು, ಗಣೇಶ್ ಕುಂದರ್ ಕುಕ್ಕೇಡಿ, ರಮೇಶ್ ಪೂಜಾರಿ ನಿಟ್ಟಡೆ, ಸದಾಶಿವ ಶೆಟ್ಟಿ ಅಳದಂಗಡಿ, ವಿಶ್ವನಾಥ ದೇವಾಡಿಗ ವೇಣೂರು, ಧರ್ನಪ್ಪ ಪೂಜಾರಿ ನಿಟ್ಟಡೆ, ವಿಘ್ನೇಶ್ ಆಚಾರ್ಯ ಬೆಳ್ತಂಗಡಿ, ಪ್ರಥಮೇಶ್ ಬೆಳ್ತಂಗಡಿ, ಕೇಶವ ಅಚ್ಚಿನಡ್ಕ, ಯೋಗೀಶ್ ಕೆಂಬರ್ಜೆ, ಹರೀಶ್. ಜಿ ಸೇರಿದಂತೆ ಹಲವು ರಾಮ ಭಕ್ತರು ಹಾಗೂ ಹಿಂದೂ ಧರ್ಮಪ್ರೇಮಿಗಳು ಉಪಸ್ಥಿತರಿದ್ದರು.

Related posts

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

Suddi Udaya
error: Content is protected !!