August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

ಬೆಳ್ತಂಗಡಿ: ಮಲವಂತಿಗೆ-ಮಿತ್ತಬಾಗಿಲು ಭಾಗದಲ್ಲಿ ರೈತರ ಕೃಷಿ ಭೂಮಿ ನಾಶ ಮಾಡಿ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಮೋಹನ್ ಗೌಡ ಆಗ್ರಹ ಮಾಡಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶ ಜನತೆ ಆನೆ ಚಿರತೆ ಹಾವಳಿಯಿಂದ ಜೀವ ಕೈಯಲ್ಲಿ ಹಿಡಿದು ಜೀವನ ನಡೆಸುತ್ತಿದ್ದಾರೆ. ಪ್ರಕೃತಿ ಪರಿಸರ ಸಂರಕ್ಷಣೆಯಲ್ಲಿ ಅವರ ಕೊಡುಗೆ ಕೃಷಿ ಜೀವನ ಮೂಲಕ ಆಗುತ್ತಿದೆ. ಅವರ ಪಾಡಿಗೆ ಅವರು ಜೀವನ ನಡೆಸುತ್ತಿದ್ದಾರೆ ಒಂದು ವೇಳೆ ಕಾನೂನು ರೀತಿ ಅವರನ್ನು ಒಕ್ಕಲು ಎಬ್ಬಿಸಿ ತೊಂದರೆ ಕೊಡುವುದೇ ಆದಲ್ಲಿ ಮೊದಲು ಅವರಿಗೆ ಶಾಶ್ವತ ಪರಿಹಾರವನ್ನು ಭೂಮಿ ನೀಡಿ ಘೋಷಣೆ ಮಾಡಬೇಕಿತ್ತು. ಅದು ಬಿಟ್ಟು ಏಕ ಏಕೀ ಅವರನ್ನು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಯಾವುದೇ ಇರಲಿ ಅದು ಜನಪರ ಕಾರ್ಯಕ್ರಮ ಮಾಡಬೇಕು. ಜನವಿರೋಧಿ ನೀತಿ ಮಾಡಿದ್ದಲ್ಲಿ ಮತ ನೀಡಿದ ಮತದಾರ ವಿರುದ್ಧ ನಿಲ್ಲುವ ದಿನ ದೂರ ಇಲ್ಲ. ಇಲ್ಲಿಯ ಜನ ಕೇಂದ್ರ ಸರ್ಕಾರ ಸಂಸದರಿಗೆ, ಶಾಸಕರಿಗೆ ಮತ ನೀಡಿ ಗೆಲ್ಲಿಸಿದ್ದಾರೆ
ದಯವಿಟ್ಟು ಈ ಬಗ್ಗೆ ಸ್ಥಳ ಪರಿಶೀಲಿಸಿ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸದಾ ಈ ಭಾಗದ ರಸ್ತೆ ಹಾಗೂ ಕೃಷಿಕರ ಧ್ವನಿ ಆಗಿರುವ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರ ಕ್ಕೆ ಒತ್ತಾಯಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya
error: Content is protected !!