June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

ಬೆಳ್ತಂಗಡಿ: ಮಲವಂತಿಗೆ-ಮಿತ್ತಬಾಗಿಲು ಭಾಗದಲ್ಲಿ ರೈತರ ಕೃಷಿ ಭೂಮಿ ನಾಶ ಮಾಡಿ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಮೋಹನ್ ಗೌಡ ಆಗ್ರಹ ಮಾಡಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶ ಜನತೆ ಆನೆ ಚಿರತೆ ಹಾವಳಿಯಿಂದ ಜೀವ ಕೈಯಲ್ಲಿ ಹಿಡಿದು ಜೀವನ ನಡೆಸುತ್ತಿದ್ದಾರೆ. ಪ್ರಕೃತಿ ಪರಿಸರ ಸಂರಕ್ಷಣೆಯಲ್ಲಿ ಅವರ ಕೊಡುಗೆ ಕೃಷಿ ಜೀವನ ಮೂಲಕ ಆಗುತ್ತಿದೆ. ಅವರ ಪಾಡಿಗೆ ಅವರು ಜೀವನ ನಡೆಸುತ್ತಿದ್ದಾರೆ ಒಂದು ವೇಳೆ ಕಾನೂನು ರೀತಿ ಅವರನ್ನು ಒಕ್ಕಲು ಎಬ್ಬಿಸಿ ತೊಂದರೆ ಕೊಡುವುದೇ ಆದಲ್ಲಿ ಮೊದಲು ಅವರಿಗೆ ಶಾಶ್ವತ ಪರಿಹಾರವನ್ನು ಭೂಮಿ ನೀಡಿ ಘೋಷಣೆ ಮಾಡಬೇಕಿತ್ತು. ಅದು ಬಿಟ್ಟು ಏಕ ಏಕೀ ಅವರನ್ನು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಯಾವುದೇ ಇರಲಿ ಅದು ಜನಪರ ಕಾರ್ಯಕ್ರಮ ಮಾಡಬೇಕು. ಜನವಿರೋಧಿ ನೀತಿ ಮಾಡಿದ್ದಲ್ಲಿ ಮತ ನೀಡಿದ ಮತದಾರ ವಿರುದ್ಧ ನಿಲ್ಲುವ ದಿನ ದೂರ ಇಲ್ಲ. ಇಲ್ಲಿಯ ಜನ ಕೇಂದ್ರ ಸರ್ಕಾರ ಸಂಸದರಿಗೆ, ಶಾಸಕರಿಗೆ ಮತ ನೀಡಿ ಗೆಲ್ಲಿಸಿದ್ದಾರೆ
ದಯವಿಟ್ಟು ಈ ಬಗ್ಗೆ ಸ್ಥಳ ಪರಿಶೀಲಿಸಿ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸದಾ ಈ ಭಾಗದ ರಸ್ತೆ ಹಾಗೂ ಕೃಷಿಕರ ಧ್ವನಿ ಆಗಿರುವ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರ ಕ್ಕೆ ಒತ್ತಾಯಿಸಿದ್ದಾರೆ.

Related posts

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya
error: Content is protected !!