August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ “ಸ್ವಾಗತಂ – 2026-27” ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಜೂ 23ರಂದು ಆಯೋಜಿಸಲಾಯಿತು.

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ಕೆ ಮಾತನಾಡಿ ಉನ್ನತ ಶಿಕ್ಷಣದಲ್ಲಿ ವಾಣಿಜ್ಯ ಶಿಕ್ಷಣದ ಮಹತ್ವ, ಉದ್ಯೋಗಾವಕಾಶಗಳು ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಶಿಸ್ತು, ಮೌಲ್ಯಗಳು ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಯಶಸ್ಸಿಗಾಗಿ ಸದಾ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ವಿದ್ಯಾಸಾಗರ ಕ್ಯಾಂಪಸ್‌ನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ ಕಾಲೇಜು ಜೀವನವನ್ನು ಸಾರ್ಥಕವಾಗಿ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ ಕೆ ಇವರು ಕಾಲೇಜಿನ ಶೈಕ್ಷಣಿಕ ಸಾಧನೆ ಹಾಗೂ ನೂತನ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿಭಾಗದ ಕಾರ್ಯಪದ್ಧತಿ ಹಾಗೂ ಭವಿಷ್ಯದ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ SSLC ಸಾಧಕರನ್ನು ಗೌರವಿಸಲಾಯಿತು.ಅಮನ್ನ ಅಮೀನಾ ಕಾರ್ಯಕ್ರಮ ನಿರೂಪಿಸಿ, ಶೌರ್ಯ ಸ್ವಾಗತಿಸಿ, ಆದಿತ್ಯ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!