August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ & ಮಹಿಳಾ ಯುವ ವೇದಿಕೆ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು, ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದ ಮತ್ತು ಬೃಹತ್ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜೂ.27 ರಂದು ಪೂರ್ವಾಹ್ನ 9 ರಿಂದ ಲಾಯಿಲ ಸಂಗಮ ಸಭಾಭವನದಲ್ಲಿ ಜರುಗಲಿದೆ ಎಂದು ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಲಾಯಿಲ ಇದರ ಅಧ್ಯಕ್ಷ ಕೆ. ಗಂಗಾಧರ ಗೌಡ ವಹಿಸಲಿರುವರು. ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅಧ್ಯಕ್ಷತೆಯನ್ನು ವಹಿಸಲಿರುವರು.

ಒಕ್ಕಲಿಗ ಗೌಡರ ಸಂಘ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ. ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುವರು.

ಭಾಗವಹಿಸುವ ವಿಭಾಗಗಳು:- ಸಾಮಾನ್ಯ ರೋಗ ವಿಭಾಗ , ಎಲುಬು ಮತ್ತು ಕೀಲು ರೋಗ ವಿಭಾಗ , ಕಣ್ಣಿನ ವಿಭಾಗ , ಕಿವಿ, ಮೂಗು ಮತ್ತು ಗಂಟಲು ವಿಭಾಗ, ದಂತ ಚಿಕಿತ್ಸೆ.

ಶಿಬಿರದಲ್ಲಿ ಲಭ್ಯವಿರುವ ಸೌಲಭ್ಯಗಳು: ಉಚಿತ ಬಿ.ಪಿ. ಹಾಗೂ ಮಧುಮೇಹ (ಶುಗರ್) ತಪಾಸಣೆ, ರಿಯಾಯಿತಿ ದರದಲ್ಲಿ (ರೂ. ೮೦ ಮಾತ್ರ) ಓದುವ ಕನ್ನಡಕ, ಉಚಿತ ಔಷಧ ವಿತರಣೆ (ಲಭ್ಯವಿರುವ ಔಷಧಗಳು ಮಾತ್ರ), ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಹುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು ಇತ್ಯಾದಿ.

ವಿಶೇಷ ಸೂಚನೆ: ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಹಸಿರು ಕಾರ್ಡು ನೀಡಲಾಗುವುದು. ಈ ಹಸಿರು ಕಾರ್ಡು ಮೂಲಕ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಒಳರೋಗಿಯಾಗಿ ದಾಖಲಾದಲ್ಲಿ ಶಸ್ತ್ರಚಿಕಿತ್ಸೆಗೆ ಗರಿಷ್ಠ ರೂ. 10000/-ಮತ್ತು ಇತರ ಚಿಕಿತ್ಸೆಗೆ ಗರಿಷ್ಠ ರೂ.5000/- ದವರೆಗೆ ರಿಯಾಯಿತಿಯಲ್ಲಿ ಆಸ್ಪತ್ರೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

Related posts

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!