June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಜೂ. 24ರಂದು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಇಲ್ಲಿ ನಡೆಯುತ್ತಿರುವ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಡಾ.ಹೆಗ್ಗಡೆ ದಂಪತಿಗಳನ್ನು ,ಹೆಗ್ಗಡೆಯವರ ಮೊಮ್ಮಗಳಾದ ಕು| ಮಾನ್ಯರವರರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಧ್ಯೇಯೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತವಾದ,ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಇಲ್ಲಿ ಕೆಲಸಮಾಡುವ ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಸಂಸ್ಥೆಯ ಸಿರಿ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಯನ್ನು ಬಯಸುತ್ತಿರುವ ಡಾ.ಹೆಗ್ಗಡೆ ದಂಪತಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಎಸ್.ಕೆ.ಡಿ.ಆರ್.ಡಿ.ಪಿ ಬಿ.ಸಿ ಟ್ರಸ್ಟ್ ನ ಟ್ರಸ್ಟಿಗಳಾದ ಡಾ. ಹರೀಶ್ ಕೃಷ್ಣ ಸ್ವಾಮಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya
error: Content is protected !!