August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಜೂ. 24ರಂದು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಇಲ್ಲಿ ನಡೆಯುತ್ತಿರುವ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಡಾ.ಹೆಗ್ಗಡೆ ದಂಪತಿಗಳನ್ನು ,ಹೆಗ್ಗಡೆಯವರ ಮೊಮ್ಮಗಳಾದ ಕು| ಮಾನ್ಯರವರರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಧ್ಯೇಯೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತವಾದ,ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಇಲ್ಲಿ ಕೆಲಸಮಾಡುವ ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಸಂಸ್ಥೆಯ ಸಿರಿ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಯನ್ನು ಬಯಸುತ್ತಿರುವ ಡಾ.ಹೆಗ್ಗಡೆ ದಂಪತಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಎಸ್.ಕೆ.ಡಿ.ಆರ್.ಡಿ.ಪಿ ಬಿ.ಸಿ ಟ್ರಸ್ಟ್ ನ ಟ್ರಸ್ಟಿಗಳಾದ ಡಾ. ಹರೀಶ್ ಕೃಷ್ಣ ಸ್ವಾಮಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya
error: Content is protected !!