ನೆರಿಯ: ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೆರಿಯ ಇದರ ವತಿಯಿಂದ ನೆರಿಯ ಗ್ರಾಮದಲ್ಲಿ ನಡೆಯುತ್ತಿರುವ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮವು ಜೂ.23ರಂದು ನಡೆಯಿತು.


ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಸೌಜನ್ಯ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ನಾಗೇಶ್ ಬಿ, ಸುಮಿತ್ರ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಮನೆಮನೆ ಭೇಟಿ ಮಾಡಿ ಡೆಂಗ್ಯೂ ಜ್ವರದ ಬಗ್ಗೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಲಾಯಿತು.













