ಬೆಳ್ತಂಗಡಿ: ಬೆಳಾಲು ಮಿನಂದೇಲು ಬಳಿ ಸ್ಕೂಟಿಯೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಜೂ.12 ರಂದು ನಡೆದಿತ್ತು.
ಸ್ಕೂಟರ್ ಚಲಾಯಿಸುತ್ತಿದ್ದ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರು ಪುತ್ರ ದಿಯಾನ್ ಅವರನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಸ್ಕೂಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಗಾಯಗೊಂಡಿದ್ದ
ದಿಯಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ (ಇಂದು) ಜೂ.24 ರಂದು ನಿಧನರಾಗಿದ್ದಾರೆ.













