August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

ಬೆಳ್ತಂಗಡಿ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಸೈನ್ಸ್ ಹಾಗೂ ಇಕೋ ಕ್ಲಬ್ ವತಿಯಿಂದ “Nurturing Nature Through Seed Balls” ಎಂಬ ವಿಶೇಷ ಚಟುವಟಿಕೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಜೀವ ವೈವಿಧ್ಯದ ಮಹತ್ವದ ಕುರಿತು ಅರಿವು ಮೂಡಿಸುವುದಾಗಿತ್ತು.

ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ. ಆರ್ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೈನ್ಸ್ ಮತ್ತು ಇಕೋ ಕ್ಲಬ್‌ನ ಶಿಕ್ಷಕಿಯರಾದ ಶ್ರೀಮತಿ ಸೌಮ್ಯ ಪಿ, ಶ್ರೀಮತಿ ನಯನ ಹಾಗೂ ಶ್ರೀಮತಿ ಪ್ರಮೀಳಾ ಎನ್ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಶಾಲೆಯ ಸಹಶಿಕ್ಷಕಿಯಾದ ಶ್ರೀಮತಿ ಸೌಮ್ಯ ಪಿ ಅವರು ಬೀಜ ಉಂಡೆಗಳ ತಯಾರಿಕೆ, ಅವುಗಳ ಉಪಯೋಗ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅವುಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಬೀಜ ಉಂಡೆಗಳನ್ನು ತಯಾರಿಸಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಿದರು.

ಈ ಚಟುವಟಿಕೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಕೃತಿಯ ಬಗ್ಗೆ ಪ್ರೀತಿ, ಪರಿಸರದ ಜವಾಬ್ದಾರಿ ಹಾಗೂ ಮರಗಳ ಸಂರಕ್ಷಣೆಯ ಅಗತ್ಯತೆಯ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related posts

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya
error: Content is protected !!