June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

ಬೆಳ್ತಂಗಡಿ: ಮಲವಂತಿಗೆ-ಮಿತ್ತಬಾಗಿಲು ಭಾಗದಲ್ಲಿ ರೈತರ ಕೃಷಿ ಭೂಮಿ ನಾಶ ಮಾಡಿ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಮೋಹನ್ ಗೌಡ ಆಗ್ರಹ ಮಾಡಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶ ಜನತೆ ಆನೆ ಚಿರತೆ ಹಾವಳಿಯಿಂದ ಜೀವ ಕೈಯಲ್ಲಿ ಹಿಡಿದು ಜೀವನ ನಡೆಸುತ್ತಿದ್ದಾರೆ. ಪ್ರಕೃತಿ ಪರಿಸರ ಸಂರಕ್ಷಣೆಯಲ್ಲಿ ಅವರ ಕೊಡುಗೆ ಕೃಷಿ ಜೀವನ ಮೂಲಕ ಆಗುತ್ತಿದೆ. ಅವರ ಪಾಡಿಗೆ ಅವರು ಜೀವನ ನಡೆಸುತ್ತಿದ್ದಾರೆ ಒಂದು ವೇಳೆ ಕಾನೂನು ರೀತಿ ಅವರನ್ನು ಒಕ್ಕಲು ಎಬ್ಬಿಸಿ ತೊಂದರೆ ಕೊಡುವುದೇ ಆದಲ್ಲಿ ಮೊದಲು ಅವರಿಗೆ ಶಾಶ್ವತ ಪರಿಹಾರವನ್ನು ಭೂಮಿ ನೀಡಿ ಘೋಷಣೆ ಮಾಡಬೇಕಿತ್ತು. ಅದು ಬಿಟ್ಟು ಏಕ ಏಕೀ ಅವರನ್ನು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಯಾವುದೇ ಇರಲಿ ಅದು ಜನಪರ ಕಾರ್ಯಕ್ರಮ ಮಾಡಬೇಕು. ಜನವಿರೋಧಿ ನೀತಿ ಮಾಡಿದ್ದಲ್ಲಿ ಮತ ನೀಡಿದ ಮತದಾರ ವಿರುದ್ಧ ನಿಲ್ಲುವ ದಿನ ದೂರ ಇಲ್ಲ. ಇಲ್ಲಿಯ ಜನ ಕೇಂದ್ರ ಸರ್ಕಾರ ಸಂಸದರಿಗೆ, ಶಾಸಕರಿಗೆ ಮತ ನೀಡಿ ಗೆಲ್ಲಿಸಿದ್ದಾರೆ
ದಯವಿಟ್ಟು ಈ ಬಗ್ಗೆ ಸ್ಥಳ ಪರಿಶೀಲಿಸಿ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸದಾ ಈ ಭಾಗದ ರಸ್ತೆ ಹಾಗೂ ಕೃಷಿಕರ ಧ್ವನಿ ಆಗಿರುವ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರ ಕ್ಕೆ ಒತ್ತಾಯಿಸಿದ್ದಾರೆ.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya
error: Content is protected !!