August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ “ಸ್ವಾಗತಂ – 2026-27” ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಜೂ 23ರಂದು ಆಯೋಜಿಸಲಾಯಿತು.

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ಕೆ ಮಾತನಾಡಿ ಉನ್ನತ ಶಿಕ್ಷಣದಲ್ಲಿ ವಾಣಿಜ್ಯ ಶಿಕ್ಷಣದ ಮಹತ್ವ, ಉದ್ಯೋಗಾವಕಾಶಗಳು ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಶಿಸ್ತು, ಮೌಲ್ಯಗಳು ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಯಶಸ್ಸಿಗಾಗಿ ಸದಾ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ವಿದ್ಯಾಸಾಗರ ಕ್ಯಾಂಪಸ್‌ನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ ಕಾಲೇಜು ಜೀವನವನ್ನು ಸಾರ್ಥಕವಾಗಿ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ ಕೆ ಇವರು ಕಾಲೇಜಿನ ಶೈಕ್ಷಣಿಕ ಸಾಧನೆ ಹಾಗೂ ನೂತನ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿಭಾಗದ ಕಾರ್ಯಪದ್ಧತಿ ಹಾಗೂ ಭವಿಷ್ಯದ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ SSLC ಸಾಧಕರನ್ನು ಗೌರವಿಸಲಾಯಿತು.ಅಮನ್ನ ಅಮೀನಾ ಕಾರ್ಯಕ್ರಮ ನಿರೂಪಿಸಿ, ಶೌರ್ಯ ಸ್ವಾಗತಿಸಿ, ಆದಿತ್ಯ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ನಾಳೆ(ಜೂ.25): ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya
error: Content is protected !!