June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ & ಮಹಿಳಾ ಯುವ ವೇದಿಕೆ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು, ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದ ಮತ್ತು ಬೃಹತ್ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜೂ.27 ರಂದು ಪೂರ್ವಾಹ್ನ 9 ರಿಂದ ಲಾಯಿಲ ಸಂಗಮ ಸಭಾಭವನದಲ್ಲಿ ಜರುಗಲಿದೆ ಎಂದು ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಲಾಯಿಲ ಇದರ ಅಧ್ಯಕ್ಷ ಕೆ. ಗಂಗಾಧರ ಗೌಡ ವಹಿಸಲಿರುವರು. ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅಧ್ಯಕ್ಷತೆಯನ್ನು ವಹಿಸಲಿರುವರು.

ಒಕ್ಕಲಿಗ ಗೌಡರ ಸಂಘ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ. ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುವರು.

ಭಾಗವಹಿಸುವ ವಿಭಾಗಗಳು:- ಸಾಮಾನ್ಯ ರೋಗ ವಿಭಾಗ , ಎಲುಬು ಮತ್ತು ಕೀಲು ರೋಗ ವಿಭಾಗ , ಕಣ್ಣಿನ ವಿಭಾಗ , ಕಿವಿ, ಮೂಗು ಮತ್ತು ಗಂಟಲು ವಿಭಾಗ, ದಂತ ಚಿಕಿತ್ಸೆ.

ಶಿಬಿರದಲ್ಲಿ ಲಭ್ಯವಿರುವ ಸೌಲಭ್ಯಗಳು: ಉಚಿತ ಬಿ.ಪಿ. ಹಾಗೂ ಮಧುಮೇಹ (ಶುಗರ್) ತಪಾಸಣೆ, ರಿಯಾಯಿತಿ ದರದಲ್ಲಿ (ರೂ. ೮೦ ಮಾತ್ರ) ಓದುವ ಕನ್ನಡಕ, ಉಚಿತ ಔಷಧ ವಿತರಣೆ (ಲಭ್ಯವಿರುವ ಔಷಧಗಳು ಮಾತ್ರ), ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಹುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು ಇತ್ಯಾದಿ.

ವಿಶೇಷ ಸೂಚನೆ: ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಹಸಿರು ಕಾರ್ಡು ನೀಡಲಾಗುವುದು. ಈ ಹಸಿರು ಕಾರ್ಡು ಮೂಲಕ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಒಳರೋಗಿಯಾಗಿ ದಾಖಲಾದಲ್ಲಿ ಶಸ್ತ್ರಚಿಕಿತ್ಸೆಗೆ ಗರಿಷ್ಠ ರೂ. 10000/-ಮತ್ತು ಇತರ ಚಿಕಿತ್ಸೆಗೆ ಗರಿಷ್ಠ ರೂ.5000/- ದವರೆಗೆ ರಿಯಾಯಿತಿಯಲ್ಲಿ ಆಸ್ಪತ್ರೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

Related posts

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya
error: Content is protected !!