August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ & ಮಹಿಳಾ ಯುವ ವೇದಿಕೆ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು, ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದ ಮತ್ತು ಬೃಹತ್ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜೂ.27 ರಂದು ಪೂರ್ವಾಹ್ನ 9 ರಿಂದ ಲಾಯಿಲ ಸಂಗಮ ಸಭಾಭವನದಲ್ಲಿ ಜರುಗಲಿದೆ ಎಂದು ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಲಾಯಿಲ ಇದರ ಅಧ್ಯಕ್ಷ ಕೆ. ಗಂಗಾಧರ ಗೌಡ ವಹಿಸಲಿರುವರು. ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅಧ್ಯಕ್ಷತೆಯನ್ನು ವಹಿಸಲಿರುವರು.

ಒಕ್ಕಲಿಗ ಗೌಡರ ಸಂಘ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ. ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುವರು.

ಭಾಗವಹಿಸುವ ವಿಭಾಗಗಳು:- ಸಾಮಾನ್ಯ ರೋಗ ವಿಭಾಗ , ಎಲುಬು ಮತ್ತು ಕೀಲು ರೋಗ ವಿಭಾಗ , ಕಣ್ಣಿನ ವಿಭಾಗ , ಕಿವಿ, ಮೂಗು ಮತ್ತು ಗಂಟಲು ವಿಭಾಗ, ದಂತ ಚಿಕಿತ್ಸೆ.

ಶಿಬಿರದಲ್ಲಿ ಲಭ್ಯವಿರುವ ಸೌಲಭ್ಯಗಳು: ಉಚಿತ ಬಿ.ಪಿ. ಹಾಗೂ ಮಧುಮೇಹ (ಶುಗರ್) ತಪಾಸಣೆ, ರಿಯಾಯಿತಿ ದರದಲ್ಲಿ (ರೂ. ೮೦ ಮಾತ್ರ) ಓದುವ ಕನ್ನಡಕ, ಉಚಿತ ಔಷಧ ವಿತರಣೆ (ಲಭ್ಯವಿರುವ ಔಷಧಗಳು ಮಾತ್ರ), ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಹುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು ಇತ್ಯಾದಿ.

ವಿಶೇಷ ಸೂಚನೆ: ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಹಸಿರು ಕಾರ್ಡು ನೀಡಲಾಗುವುದು. ಈ ಹಸಿರು ಕಾರ್ಡು ಮೂಲಕ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಒಳರೋಗಿಯಾಗಿ ದಾಖಲಾದಲ್ಲಿ ಶಸ್ತ್ರಚಿಕಿತ್ಸೆಗೆ ಗರಿಷ್ಠ ರೂ. 10000/-ಮತ್ತು ಇತರ ಚಿಕಿತ್ಸೆಗೆ ಗರಿಷ್ಠ ರೂ.5000/- ದವರೆಗೆ ರಿಯಾಯಿತಿಯಲ್ಲಿ ಆಸ್ಪತ್ರೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

Related posts

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya
error: Content is protected !!