ಬೆಳ್ತಂಗಡಿ : ವಕೀಲರ ಸಂಘದ ಸದಸ್ಯರ ಅನುಕೂಲಕ್ಕಾಗಿ ಸಂಘದ ಹಿರಿಯ ಸದಸ್ಯ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರವರ ಪ್ರದೇಶಾಭಿವೃದ್ಧಿ ಅನುದಾನದಿಂದ ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರಂಥಾಲಯ ಮತ್ತು ಜನರೇಟರ್ ಸೌಲಭ್ಯಗಳ ಉದ್ಘಾಟನಾ ಕಾರ್ಯಕ್ರಮವು ಜೂ.25ರಂದು ಅಪರಾಹ್ನ1 ಗಂಟೆಗೆ ವಕೀಲರ ಭವನದಲ್ಲಿ ನಡೆಯಲಿದೆ.
ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರವರು ನಡೆಸಲಿದ್ದು ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಶ್ರೇಣಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಮನು ಬಿ.ಕೆ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ರಾಮಲಿಂಗಪ್ಪ, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್, ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಮತ್ತು ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್.ಎಂ ಭಾಗವಹಿಸಲಿದ್ದಾರೆ.













