ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-2029ನೇ ಸಾಲಿನ ಯುವ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಕಿರಣ್ ಬುಡ್ಡೆಗುತ್ತು ಹಾಗೂ ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳ ಸಮ್ಮುಖದಲ್ಲಿ ಜೂ.23ರಂದು ನಡೆಯಿತು.
ಈ ಸಂದರ್ಭದಲ್ಲಿ ಮಹಿಳಾ ಘಟಕ ಹಾಗೂ ಯುವ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಯುವ ಘಟಕದ ಅಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕಿನ ರಕ್ಷಿತ್ ಪುತ್ತಿಲ ಮತ್ತು ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆಯಾದರು.













