
ಲಾಯಿಲ : ಗ್ರಾಮೀಣ ಭಾಗದ ಸಾಂಪ್ರದಾಯಿಕ ತಿಪ್ಪೆಗಳಲ್ಲಿ ಕೃಷಿ ತ್ಯಾಜ್ಯದ ಜೊತೆಗೆ ಪ್ಲಾಸ್ಟಿಕ್ ಸೇರುತ್ತಿರುವುದು ಪರಿಸರ ಮತ್ತು ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನಲೆಯಲ್ಲಿ, ಹಳ್ಳಿಗಳನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತಗೊಳಿಸಲು ಜೂ.12 ರಿಂದ ಜೂ.26 ರವರೆಗೆ ಎರಡು ವಾರಗಳ ಕಾಲ ಗ್ರಾಮೀಣ ಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದ್ದು ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಜೂ.24 ರಂದು ಲಾಯಿಲ ಗ್ರಾಮದ ಭಾರತ್ ಮಾತಾ ಸಭಾ ಭವನದಲ್ಲಿ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ ನಡೆಸಿ ಲಾಯಿಲ ಜಂಕ್ಷನ್ ಬಳಿಯಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಶೇಷ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲಾಯಿತು.


ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಪಂಚಾಯತ್ ಸ್ವಚ್ಛತಾ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ. ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.













