23.4 C
ಪುತ್ತೂರು, ಬೆಳ್ತಂಗಡಿ
June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಒತ್ತಡವಿಲ್ಲದೆ ಅನುಭವಾತ್ಮಕ, ಸೃಜನಾತ್ಮಕ, ಹಾಗೂ ಜೀವನ ಕೌಶಲ್ಯ ಆಧಾರಿತ ಕಲಿಕೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಸಂಭ್ರಮ ಶನಿವಾರ’ ಕಾರ್ಯಕ್ರಮವನ್ನು ಎಸ್‌ಡಿಎಂ ಅನುದಾನಿತ ಹಿ.ಪ್ರಾ ಶಾಲೆ ಉಜಿರೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಮಕ್ಕಳ ಶಾಲೆಯ ಬ್ಯಾಗ್ ನ ಭಾರವನ್ನು ಕಡಿಮೆ ಮಾಡುವುದು, ಆಟ, ಕಲೆ, ಸಂಗೀತ, ನಾಟಕ, ವಿಜ್ಞಾನ ಇಂತಹ ವಿಷಯಗಳನ್ನು ಚಟುವಟಿಕೆಗಳ ಮೂಲಕ ಕಲಿಸುವುದು, ಮಕ್ಕಳಲ್ಲಿ ಜೀವನ ಕೌಶಲ್ಯ ಮತ್ತು ಸಾಮಾಜಿಕ ಜಾಗೃತಿಯನ್ನು ಬೆಳೆಸುವುದು ಹೀಗೆ ಮುಂತಾದ ಉದ್ದೇಶಗಳನ್ನು ಹೊಂದಿದೆ.
ಕಾರ್ಯಕ್ರಮದ ಪ್ರಯುಕ್ತ ವಿಶೇಷ ಚೇತನ ವುಳ್ಳ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಗ್ರಾಮೀಣ ವಿಶೇಷ ಚೇತನ ಅಭ್ಯರ್ಥಿಗಳ ಪುನರ್ವಸತಿ ಕಾರ್ಯಕರ್ತರಾಗಿರುವ ವಿಪುಲ ಕುಮಾರ್ ಮಾತನಾಡಿ “ವಿಶೇಷ ಚೇತನ ಮಕ್ಕಳಿಗೆ ಹೆಚ್ಚಿನ ಅವಕಾಶದ ಅಗತ್ಯತೆ ಇದೆ, ಎಲ್ಲ ಕ್ಷೇತ್ರಗಳಲ್ಲೂ ವಿಶೇಷ ಚೇತನರು ಗುರುತಿಸಿಕೊಂಡಿದ್ದಾರೆ” ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು. ವಿಶೇಷ ಚೇತನರಿಗೆ ಸಂಬಂಧಿಸಿದಂತೆ ವಿವಿಧ ಬಿತ್ತಿ ಪತ್ರ ಅನಾವರಣಗೊಳಿಸಲಾಯಿತು. ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು, ಶಾಲಾ ಸಹ ಶಿಕ್ಷಕಿ ರೇವತಿ ವಂದನೆಗೈದರು, ಶಾಲಾ ಸಹ ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

Related posts

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya
error: Content is protected !!