ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ ಹಾಗೂ ಒಂದು ವಾರಗಳ ಕಾಲ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭವು ಗಣ್ಯರ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಬೆಳಾಲು ಮಾತನಾಡಿ ” ಯೋಗ ಹಾಗೂ ಮಕ್ಕಳ ಮನಸ್ಸು ಒಂದಕ್ಕೊಂದು ಪೂರಕವಾಗಿದೆ. ಮುಂದಿನ ದಿನಗಳಲ್ಲಿ ಯಕ್ಷಗಾನ ವಿಶ್ವ ವ್ಯಾಪ್ತಿಯಾಗಲಿ” ಎಂದು ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ಉಪನ್ಯಾಸಕಿ ಡಾ. ರೆನಿತಾ ಮಾತನಾಡಿ “ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಯೋಗ ಸಹಕಾರಿ, ಜೊತೆಗೆ ಮಕ್ಕಳು ಉತ್ತಮ ಆಹಾರ ವನ್ನು ಸೇವನೆ ಮಾಡಿ ” ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರರಾದ ಸಾನಿಕಾ ಹಾಗೂ ಅನಘಾ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಸಹ ಶಿಕ್ಷಕಿ ರೇವತಿ ಇವರು ಸ್ವಾಗತಿಸಿದರು. ಸಹ ಶಿಕ್ಷಕಿ ಗೀತಾ ವಂದಿಸಿದರು.
ಕಾರ್ಯಕ್ರಮದ ನಿರೂಪಣೆ ಯನ್ನು ಶಾಲಾ ಧೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ನೆರವೇರಿಸಿದರು.












