August 11, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ : ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡ ಅರಸಿನಮಕ್ಕಿಯ ಸನುಷ

ಬೆಳ್ತಂಗಡಿ: ಮಂಗಳೂರಿನ ಬೋಳೂರಿನಲ್ಲಿ ನಡೆದ ಪಾಥ್ ವೇ ಎಂಟ‌ರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾದ ಏಳನೇ ಆವೃತ್ತಿಯ ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಅರಸಿನಮಕ್ಕಿಯ ಸನುಷ ಅವರು ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡು ಮುಂದಿನ ಹಂತದ ಇಂಟರ್‌ನ್ಯಾಷನಲ್ ಲೆವೆಲ್ ಸೌಂದರ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಅರಸಿನಮಕ್ಕಿಯ ಸೌಮ್ಯ ಮತ್ತು ರಾಜನ್ ದಂಪತಿಯ ಪುತ್ರಿ ಯಾಗಿದ್ದು ಪ್ರಸ್ತುತ ಕೊಕ್ಕಡದ ಸೈಂಟ್ ಫ್ರಾನ್ಸಿಸ್ ಪಿ.ಯು. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ಸನುಷ, ನೃತ್ಯ, ಕ್ರೀಡೆ ಹಾಗೂ ಮಾಡಲಿಂಗ್ ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಮಾಡೆಲಿಂಗ್ ಅವರ ನೆಚ್ಚಿನ ಹವ್ಯಾಸವಾಗಿದ್ದು, ತಮ್ಮ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ಈ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.


ರಾಜ್ಯ ಮಟ್ಟದ ಈ ಸ್ಪರ್ಧೆಯಲ್ಲಿ ಮೂರು ವಿಭಾಗಗಳಿಂದ ಒಟ್ಟು 35 ಸ್ಪರ್ಧಿಗಳು ಭಾಗವಹಿಸಿದ್ದು, ಟೀನ್ ವಿಭಾಗದಲ್ಲಿ ಸನುಷ ಅವರು ಟಾಪ್-10 ಫೈನಲಿಸ್ಟ್ ಆಗಿ ಗ್ರಾಂಡ್ ಫಿನಾಲೆಗೆ ಆಯ್ಕೆಯಾಗಿದ್ದರು. ಗ್ರಾಂಡ್ ಫಿನಾಲೆಯಲ್ಲಿ ಟ್ರಡಿಷನಲ್ ರೌಂಡ್, ವೆಸ್ಟರ್ನ್ ರೌಂಡ್, ಟ್ಯಾಲೆಂಟ್ ರೌಂಡ್ ಪರಿಚಯ ಹಾಗೂ ಪ್ರಶೋತ್ತರ ಸುತ್ತುಗಳ ಮೂಲಕ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಯಿತು. ಈ ಎಲ್ಲ ಸುತ್ತುಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತೀರ್ಪುಗಾರರ ಮೆಚ್ಚುಗೆ ಗಳಿಸಿ ಫಸ್ಟ್ ರನ್ನರ್ ಆಫ್ ಸ್ನಾನವನ್ನು ತಮ್ಮದಾಗಿಸಿಕೊಂಡರು.

ಪ್ರತಿಭಾ ಕಾರಂಜಿ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಮಟ್ಟದಲ್ಲಿ ಪುಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು. ಕಾಲೇಜು ವಿಭಾಗದಲ್ಲಿ ತಾಲೂಕು ಮಟ್ಟದ ಸ್ಪೋರ್ಟ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಶಾಲಾ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ‘ಕಲಾ ತಿಲಕ’ ಪ್ರಶಸ್ತಿಯನ್ನು ಪಡೆದು ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಸೌಂದರ್ಯ ಸ್ಪರ್ಧೆಗೆ ಮಂಗಳೂರಿನ ಪ್ರಸಿದ್ದ ಮಾಡೆಲಿಂಗ್ ತರಬೇತಿ ಸಂಸ್ಥೆ ಪಾತ್ ವೇನಲ್ಲಿ ದೀಪಕ್ ಗಂಗೂಲಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು.

ಮುಂದಿನ ದಿನಗಳಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಉತ್ತಮ ಸಾಧನೆ ಮಾಡಬೇಕೆಂಬ ಕನಸನ್ನು ಹೊಂದಿರುವ ಸನುಷ ಅವರ ಜೀವನದ ಪ್ರಮುಖ ಗುರಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದು ಆಗಿದೆ. ದೇಶಸೇವೆಯ ಜೊತೆಗೆ ಮಾಡಲಿಂಗ್ ಕ್ಷೇತ್ರದಲ್ಲಿಯೂ ಸಾಧನೆ ಮಾಡಿ ಯುವಜನತೆಗೆ ಮಾದರಿಯಾಗಬೇಕೆಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ. ಇವರ ಸಾಧನೆಗೆ ಪೋಷಕರು, ಶಿಕ್ಷಕರು, ಸ್ನೇಹಿತರು ಹಾಗೂ ಊರಿನ ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
error: Content is protected !!