23.4 C
ಪುತ್ತೂರು, ಬೆಳ್ತಂಗಡಿ
June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

ಪಡಂಗಡಿ : ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛತೆಯ ಕುರಿತು ಮಾಹಿತಿ ಕಾರ್ಯಕ್ರಮವು ಜರುಗಿತು.

ತನ್ನ ಮನೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಇಡೀ ಗ್ರಾಮವು ಸಮಗ್ರವಾಗಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಸಾಧ್ಯ. ಆದ್ದರಿಂದ ಪ್ರತೀ ಮನೆಯ ಸದಸ್ಯರು ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಿ, ಮನೆಯಲ್ಲಿ ಉತ್ಪತ್ತಿಯಾಗುವ ಹಸಿಕಸವನ್ನು ತಮ್ಮ ಮನೆಯ ಹಂತದಲ್ಲೇ ಸೂಕ್ತವಾಗಿ ವಿಲೇವಾರಿ ಮಾಡಿ ಒಣಕಸವನ್ನು ಗ್ರಾಮ ಪಂಚಾಯತಿಯ ಸ್ವಚ್ಛವಾಹಿನಿಗೆ ನೀಡುವಂತೆ ಮತ್ತು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಆರೋಗ್ಯಕರವಾದ ಜೀವನ ನಡೆಸುವಂತೆ ಆರೋಗ್ಯ ಕಾರ್ಯಕರ್ತೆಯವರಾದ ಪ್ರೀತಿ ಶೆಟ್ಟಿ ಮಾಹಿತಿ ನೀಡಿದರು.

ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತಿಯ ವ್ಯಾಪ್ತಿಯು ನಿರಂತರವಾಗಿ ಸ್ವಚ್ಛತೆಯಿಂದ ಕೂಡಿರಲು ಪ್ರತೀ ಮನೆಯವರ ಸಹಕಾರ ಅತೀ ಅಗತ್ಯವೆಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.

Related posts

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya
error: Content is protected !!