August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

ಬೆಳ್ತಂಗಡಿ: ಇಲ್ಲಿನ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗದಲ್ಲಿರುವ ಬೃಹತ್ ಮರವು ಗಾಳಿ-ಮಳೆಯ ಸಂದರ್ಭ ಮನೆಗಳ ಮೇಲೆ ಬೀಳುವ ಅಪಾಯವನ್ನು ತಂದೊಡ್ಡಿದ್ದು,ಸ್ಥಳೀಯ ನಿವಾಸಿಗಳು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ.

ಈ ಬಗ್ಗೆ ಹಲವಾರು ಬಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಲಿಖಿತ ಹಾಗೂ ಮೌಖಿಕವಾಗಿ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ತೀವ್ರಗೊಂಡಿರುವ ಈ ಸಂದರ್ಭದಲ್ಲಿ ಮರವು ಯಾವ ಕ್ಷಣದಲ್ಲಾದರೂ ಮನೆಗಳ ಮೇಲೆ ಉರುಳಿ ಬಿದ್ದು ಜೀವಹಾನಿ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುವ ಸಾಧ್ಯತೆ ಇದೆ. ಅಪಾಯದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಇಲಾಖೆಯ ಉದಾಸೀನತೆಯನ್ನು ತೋರಿಸುತ್ತಿದೆ. ಯಾವುದೇ ದುರಂತ ಸಂಭವಿಸಿದ ಬಳಿಕ ಮಾತ್ರ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.


ಮುಂದೆ ಯಾವುದೇ ಜೀವಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿದಲ್ಲಿ ಅದರ ಸಂಪೂರ್ಣ ಹೊಣೆಯನ್ನು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿಯಾದ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!