August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

ಬೆಳ್ತಂಗಡಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.
ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಜತೆಗೆ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ಅವರಿಗೆ ನೀಡಲಾಗಿದೆ. 2009ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ಎಂ.ಎನ್. ಅನುಚೇತ್ ಅವರು ವೃತ್ತಿ ಜೀವನದಲ್ಲಿ ಸೂಕ್ಷ್ಮ ಮತ್ತು ಗಂಭೀರ ಪ್ರಕರಣಗಳ ತನಿಖೆಯಿಂದ ಹೆಸರುವಾಸಿಯಾಗಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಸಂಬಂಧ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಗಲಾಟೆ ಮತ್ತು ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ್ದ ಮಾರನೇ ದಿನವೇ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ಎಂ.ಎನ್. ಅನುಚೇತ್ ಅವರನ್ನು ಸರ್ಕಾರ ನಿಯೋಜನೆ ಮಾಡಿತ್ತು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya
error: Content is protected !!