23.4 C
ಪುತ್ತೂರು, ಬೆಳ್ತಂಗಡಿ
June 26, 2026
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿನ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂನ್ 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿಯಲ್ಲಿ ಮೊಬೈಲ್ ನಲ್ಲಿ EVM ಇದರ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ಮತದಾನದ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ. ತೇಜಸ್ ಭಟ್, ಉಪನಾಯಕಿಯಾಗಿ ಫಾತಿಮಾ ಅಸ್ನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಹೃತಿಕ್. ಆರ್ ಮತ್ತು ಮಹಮ್ಮದ್ ಶೈಫ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಸುಹ ಮತ್ತು ಚಿಂತನ್, ಗ್ರಂಥಾಲಯ ಮತ್ತು ಶಿಕ್ಷಣ ಮಂತ್ರಿಯಾಗಿ ಗೌತಮಿ ಮತ್ತು ಶಿಫಾ, ನೀರಾವರಿ ಮತ್ತು ತೋಟಗಾರಿಕಾ ಕೃಷಿಮಂತ್ರಿಯಾಗಿ ವಂಶಿಕ್ ಮತ್ತು ಚೇತನ್, ಕ್ರೀಡಾ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಆಯಿಷಾ ಮತ್ತು ನಿಹಾಲ್ ರವರನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಮತ್ತು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕು ಎಂಬುದಾಗಿ ಶಿಕ್ಷಕರು ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya
error: Content is protected !!