August 10, 2026
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿನ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂನ್ 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿಯಲ್ಲಿ ಮೊಬೈಲ್ ನಲ್ಲಿ EVM ಇದರ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ಮತದಾನದ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ. ತೇಜಸ್ ಭಟ್, ಉಪನಾಯಕಿಯಾಗಿ ಫಾತಿಮಾ ಅಸ್ನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಹೃತಿಕ್. ಆರ್ ಮತ್ತು ಮಹಮ್ಮದ್ ಶೈಫ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಸುಹ ಮತ್ತು ಚಿಂತನ್, ಗ್ರಂಥಾಲಯ ಮತ್ತು ಶಿಕ್ಷಣ ಮಂತ್ರಿಯಾಗಿ ಗೌತಮಿ ಮತ್ತು ಶಿಫಾ, ನೀರಾವರಿ ಮತ್ತು ತೋಟಗಾರಿಕಾ ಕೃಷಿಮಂತ್ರಿಯಾಗಿ ವಂಶಿಕ್ ಮತ್ತು ಚೇತನ್, ಕ್ರೀಡಾ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಆಯಿಷಾ ಮತ್ತು ನಿಹಾಲ್ ರವರನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಮತ್ತು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕು ಎಂಬುದಾಗಿ ಶಿಕ್ಷಕರು ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya
error: Content is protected !!