June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಒತ್ತಡವಿಲ್ಲದೆ ಅನುಭವಾತ್ಮಕ, ಸೃಜನಾತ್ಮಕ, ಹಾಗೂ ಜೀವನ ಕೌಶಲ್ಯ ಆಧಾರಿತ ಕಲಿಕೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಸಂಭ್ರಮ ಶನಿವಾರ’ ಕಾರ್ಯಕ್ರಮವನ್ನು ಎಸ್‌ಡಿಎಂ ಅನುದಾನಿತ ಹಿ.ಪ್ರಾ ಶಾಲೆ ಉಜಿರೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಮಕ್ಕಳ ಶಾಲೆಯ ಬ್ಯಾಗ್ ನ ಭಾರವನ್ನು ಕಡಿಮೆ ಮಾಡುವುದು, ಆಟ, ಕಲೆ, ಸಂಗೀತ, ನಾಟಕ, ವಿಜ್ಞಾನ ಇಂತಹ ವಿಷಯಗಳನ್ನು ಚಟುವಟಿಕೆಗಳ ಮೂಲಕ ಕಲಿಸುವುದು, ಮಕ್ಕಳಲ್ಲಿ ಜೀವನ ಕೌಶಲ್ಯ ಮತ್ತು ಸಾಮಾಜಿಕ ಜಾಗೃತಿಯನ್ನು ಬೆಳೆಸುವುದು ಹೀಗೆ ಮುಂತಾದ ಉದ್ದೇಶಗಳನ್ನು ಹೊಂದಿದೆ.
ಕಾರ್ಯಕ್ರಮದ ಪ್ರಯುಕ್ತ ವಿಶೇಷ ಚೇತನ ವುಳ್ಳ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಗ್ರಾಮೀಣ ವಿಶೇಷ ಚೇತನ ಅಭ್ಯರ್ಥಿಗಳ ಪುನರ್ವಸತಿ ಕಾರ್ಯಕರ್ತರಾಗಿರುವ ವಿಪುಲ ಕುಮಾರ್ ಮಾತನಾಡಿ “ವಿಶೇಷ ಚೇತನ ಮಕ್ಕಳಿಗೆ ಹೆಚ್ಚಿನ ಅವಕಾಶದ ಅಗತ್ಯತೆ ಇದೆ, ಎಲ್ಲ ಕ್ಷೇತ್ರಗಳಲ್ಲೂ ವಿಶೇಷ ಚೇತನರು ಗುರುತಿಸಿಕೊಂಡಿದ್ದಾರೆ” ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು. ವಿಶೇಷ ಚೇತನರಿಗೆ ಸಂಬಂಧಿಸಿದಂತೆ ವಿವಿಧ ಬಿತ್ತಿ ಪತ್ರ ಅನಾವರಣಗೊಳಿಸಲಾಯಿತು. ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು, ಶಾಲಾ ಸಹ ಶಿಕ್ಷಕಿ ರೇವತಿ ವಂದನೆಗೈದರು, ಶಾಲಾ ಸಹ ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

Related posts

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya
error: Content is protected !!